mla harish gowda
ಮೈಸೂರು : ಆರ್ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಯಾರದ್ದು ತಪ್ಪು ಯಾರದ್ದು ಸರಿ ಎನ್ನುವುದನ್ನ ಈಗ ಹೇಳಲಿಕ್ಕೆ ಆಗಲ್ಲ. ಏಕಕಾಲದಲ್ಲಿ ಅಷ್ಟೊಂದು ಜನ ಸೇರುತ್ತಾರೆ ಎನ್ನುವ ನಿರೀಕ್ಷೆ ಕೂಡ ಇರಲಿಲ್ಲ ಎಂದಿದ್ದಾರೆ.
ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ನೀಡಿ ಸೂಕ್ತ ಕಾನೂನು ಸುವ್ಯವಸ್ಥೆ ಕೊಡಬೇಕಿತ್ತು. ಆದರೆ ಮಾಹಿತಿ ನೀಡಿಲ್ಲ. ನಮ್ಮ ಸರ್ಕಾರದ ತಪ್ಪೂ ಕೂಡ ಇದೆ. ಹೋದ ಪ್ರಾಣ ಮತ್ತೆ ಬರಲ್ಲ ಘಟನೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಬಿಜೆಪಿಗೆ ಕಿಂಚಿತ್ತು ಮರುಕವಿಲ್ಲ
ಬಿಜೆಪಿ,ಜೆಡಿಎಸ್ ಸಾವಿನ ಮನೆಯಲ್ಲಿ ಗಳ ಎಳೆಯುವ ಕೆಲಸ ಮಾಡುತ್ತಿದೆ. ಅವರಿಗೆ ಘಟನೆ ಬಗ್ಗೆ ಕಿಂಚಿತ್ತು ಮರುಕವಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಬೆಂಗಳೂರು ಕಾಲ್ತುಳಿತ ಪ್ರಕರಣ : ಎನ್ಐಎ ತನಿಖೆ ಸಾಧ್ಯತೆ
ಸಾವಿನ ಮೇಲೆ ರಾಜಕೀಯ ಮಾಡುವುದು ಅವರಿಗೆ ಅಭ್ಯಾಸವಾಗಿದೆ. ಅವರು ಹಿಂದಿನಿಂದಲೂ ಜನರ ಭಾವನೆಗಳ ನಡುವೆ ಆಟ ಆಡಿ ಅಭ್ಯಾಸ. ಹಿಂದು ಮುಸ್ಲಿಂ ನಡುವೆ ಕೋಮು ದ್ವೇಷ ಸೃಷ್ಟಿಸಿ ಇದು ವರೆಗೆ ಲಕ್ಷಾಂತರ ಜನ ಸಾಯಿಸಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ ಎಂದು ಆರೋಪಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…