ಮೈಸೂರು

ಆರ್‌ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್‌ ಗೌಡ

ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಯಾರದ್ದು ತಪ್ಪು ಯಾರದ್ದು ಸರಿ ಎನ್ನುವುದನ್ನ ಈಗ ಹೇಳಲಿಕ್ಕೆ ಆಗಲ್ಲ. ಏಕಕಾಲದಲ್ಲಿ ಅಷ್ಟೊಂದು ಜನ ಸೇರುತ್ತಾರೆ ಎನ್ನುವ ನಿರೀಕ್ಷೆ ಕೂಡ ಇರಲಿಲ್ಲ ಎಂದಿದ್ದಾರೆ.

ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ನೀಡಿ ಸೂಕ್ತ ಕಾನೂನು ಸುವ್ಯವಸ್ಥೆ ಕೊಡಬೇಕಿತ್ತು. ಆದರೆ ಮಾಹಿತಿ ನೀಡಿಲ್ಲ. ನಮ್ಮ ಸರ್ಕಾರದ ತಪ್ಪೂ ಕೂಡ ಇದೆ. ಹೋದ ಪ್ರಾಣ ಮತ್ತೆ ಬರಲ್ಲ ಘಟನೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಬಿಜೆಪಿಗೆ ಕಿಂಚಿತ್ತು ಮರುಕವಿಲ್ಲ
ಬಿಜೆಪಿ,ಜೆಡಿಎಸ್ ಸಾವಿನ ಮನೆಯಲ್ಲಿ ಗಳ ಎಳೆಯುವ ಕೆಲಸ ಮಾಡುತ್ತಿದೆ. ಅವರಿಗೆ ಘಟನೆ ಬಗ್ಗೆ ಕಿಂಚಿತ್ತು ಮರುಕವಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ:- ಬೆಂಗಳೂರು ಕಾಲ್ತುಳಿತ ಪ್ರಕರಣ : ಎನ್‌ಐಎ ತನಿಖೆ ಸಾಧ್ಯತೆ

ಸಾವಿನ ಮೇಲೆ ರಾಜಕೀಯ ಮಾಡುವುದು ಅವರಿಗೆ ಅಭ್ಯಾಸವಾಗಿದೆ. ಅವರು ಹಿಂದಿನಿಂದಲೂ ಜನರ ಭಾವನೆಗಳ ನಡುವೆ ಆಟ ಆಡಿ ಅಭ್ಯಾಸ. ಹಿಂದು ಮುಸ್ಲಿಂ ನಡುವೆ ಕೋಮು ದ್ವೇಷ ಸೃಷ್ಟಿಸಿ ಇದು ವರೆಗೆ ಲಕ್ಷಾಂತರ ಜನ ಸಾಯಿಸಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

5 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

5 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

5 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

5 hours ago