ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ರಾಜಕಾರಣಿಗಳು ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ. ಸರಿಯಾಗಿ ತನಿಖೆ ಮಾಡಿದರೆ ಎಲ್ಲರ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.
ಚಾಮುಂಡೇಶ್ವರಿ ನಗರದ ಸರ್ವೋದಯ ಸಂಘದಿಂದ ಸುಮಾರು 48 ಜನರಿಗೆ ಅಕ್ರಮವಾಗಿ ಮುಡಾದಿಂದ ನಿವೇಶನ ನೀಡಲಾಗಿದೆ. ಇದರಲ್ಲಿ ರಾಜಕಾರಣಿಗಳು, ರಿಯಲ್ ಎಸ್ಟೇಟ್ ಏಜೆಂಟ್ಗಳು, ಬಿಲ್ಡರ್ಗಳಿಗೆ ನಿವೇಶನ ಕೊಟ್ಟದ್ದಾರೆ. ಬೇನಾಮಿ ಆಸ್ತಿ ಮಾಡಿರುವ ರಾಜಕಾರಣಿಗಳ ಹೆಸರನ್ನು ನಾನು ಹೇಳುವುದಿಲ್ಲ. ಸರಿಯಾಗಿ ತನಿಖೆ ಮಾಡಿದರೆ ರಾಜಕಾರಣಿಗಳ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.
ಮುಡಾದಲ್ಲಿ ಏನೇನೂ ಹಗರಣ ಆಗಿದೇಯೋ ಅದೆಲ್ಲವನ್ನು ಶುದ್ಧಿಕರಣ ಮಾಡುವ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ನಡೆಯುತ್ತಿದೆ. ಮುಡಾ ಬೋರ್ಡ್ ಹಾಕಿಸಿ ಆಸ್ತಿಯನ್ನು ರಕ್ಷಣೆ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.
14 ನಿವೇಶನಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ ಪಾತ್ರವೇನಿಲ್ಲ. ಸಹೋದರ ನೀಡಿದ್ದ ಜಮೀನಿಗೆ ಪರಿಹಾರವಾಗಿ 50:50 ಅನುಪಾತದಲ್ಲಿ ಜಾಗವನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರು ಯಾವುದೇ ರೀತಿ ರಾಜಕೀಯ ಪ್ರಭಾವ ಬೀರಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…