ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ರಾಜಕಾರಣಿಗಳು ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ. ಸರಿಯಾಗಿ ತನಿಖೆ ಮಾಡಿದರೆ ಎಲ್ಲರ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.
ಚಾಮುಂಡೇಶ್ವರಿ ನಗರದ ಸರ್ವೋದಯ ಸಂಘದಿಂದ ಸುಮಾರು 48 ಜನರಿಗೆ ಅಕ್ರಮವಾಗಿ ಮುಡಾದಿಂದ ನಿವೇಶನ ನೀಡಲಾಗಿದೆ. ಇದರಲ್ಲಿ ರಾಜಕಾರಣಿಗಳು, ರಿಯಲ್ ಎಸ್ಟೇಟ್ ಏಜೆಂಟ್ಗಳು, ಬಿಲ್ಡರ್ಗಳಿಗೆ ನಿವೇಶನ ಕೊಟ್ಟದ್ದಾರೆ. ಬೇನಾಮಿ ಆಸ್ತಿ ಮಾಡಿರುವ ರಾಜಕಾರಣಿಗಳ ಹೆಸರನ್ನು ನಾನು ಹೇಳುವುದಿಲ್ಲ. ಸರಿಯಾಗಿ ತನಿಖೆ ಮಾಡಿದರೆ ರಾಜಕಾರಣಿಗಳ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.
ಮುಡಾದಲ್ಲಿ ಏನೇನೂ ಹಗರಣ ಆಗಿದೇಯೋ ಅದೆಲ್ಲವನ್ನು ಶುದ್ಧಿಕರಣ ಮಾಡುವ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ನಡೆಯುತ್ತಿದೆ. ಮುಡಾ ಬೋರ್ಡ್ ಹಾಕಿಸಿ ಆಸ್ತಿಯನ್ನು ರಕ್ಷಣೆ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.
14 ನಿವೇಶನಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ ಪಾತ್ರವೇನಿಲ್ಲ. ಸಹೋದರ ನೀಡಿದ್ದ ಜಮೀನಿಗೆ ಪರಿಹಾರವಾಗಿ 50:50 ಅನುಪಾತದಲ್ಲಿ ಜಾಗವನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರು ಯಾವುದೇ ರೀತಿ ರಾಜಕೀಯ ಪ್ರಭಾವ ಬೀರಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…