ಮೈಸೂರು

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ

ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅವರುಗಳನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಂತರ ಅವರುಗಳು ಬಾಂಗ್ಲಾ ವಲಸಿಗರಲ್ಲ ಎಂಬುದು ದೃಡಪಟ್ಟಿದೆ.

ಭಾನುವಾರ ಬೆಳಿಗ್ಗೆ ಔರಾ ಎಕ್ಸಪ್ರೆಸ್ ರೈಲಿನ ಮೂಲಕ ಸುಮಾರು 34 ಮಂದಿ ಪ್ರಯಾಣಿಕರು ಬಂದಿದ್ದಾರೆ. ಮೈಸೂರು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವರನ್ನು ಸುತ್ತುವರೆದ ಹಿಂದೂ ಜಾಗರಣ ವೇದಿಕೆ ಸದಸ್ಯರು ಅವರುಗಳನ್ನು ಪ್ರಶ್ನಿಸಿದ್ದಾರೆ. ನಂತರ ಅವರುಗಳು ಬಾಂಗ್ಲಾ ದೇಶದ ಪ್ರಜೆಗಳು ಎಂಬ ಅನುಮಾನ ಮೂಡಿದೆ. ತಕ್ಷಣವೇ ಎಲ್ಲ 34 ಮಂದಿಯನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂದ ರೈಲ್ವೇ ಪೊಲೀಸರು ಅವರುಗಳ ಆಧಾರ್ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅದರಲ್ಲಿ ಅವರುಗಳು ಪಶ್ಚಿಮ ಬಂಗಾಳ ಮೂಲದವರು ಎಂಬುದು ಗೊತ್ತಾಗಿದೆ. ಆದರೂ, ಆಧಾರ್ ಕಾರ್ಡ್‌ನ ಪರಿಶೀಲನೆಗಾಗಿ ಗ್ರೇಡ್ 2 ತಹಸೀಲ್ದಾರ ಅವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಸ್ಥಳಕ್ಕೆ ಬಂದ ಅವರು ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದ್ದಾರೆ.

ನಂತರ ಅವರುಗಳು ಪಶ್ಚಿಮ ಬಂಗಾಳದ ನಿವಾಸಿಗಳು ಎಂಬದು ಸಾಬೀತಾಗಿದೆ. ಈ ಸಂಬಂದ ಅವರುಗಳ ಆಧಾರ್ ಕಾರ್ಡ್ ನಕಲನ್ನು ಪಡೆದು, ಅವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡ ಪೊಲೀಸರು ಅವರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

ಕೆಲಸಕ್ಕಾಗಿ ಬಂದವರು
ಇಂದು ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪಶ್ಚಿಮ ಬಂಗಾಳದ ವಲಸಿಗರು ಕಟ್ಟಡ, ವಿದ್ಯುತ್, ಪೇಯಿಂಟಿಂಗ್ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರುಗಳು ವಾರಕ್ಕೆ ಒಮ್ಮೆ ಕೋಲ್ಕತ್ತಾದಿಂದ ಬರುವ ಔರಾ ರೈಲಿನಲ್ಲಿ ಮೈಸೂರಿಗೆ ಬರುತ್ತಾರೆ. ನಂತರ ಮೈಸೂರು ಮೂಲಕ ಮಂಡ್ಯ, ಕೇರಳ, ಮಡಿಕೇರಿ ಭಾಗಗಳಿಗೆ ತೆರಳುವುದು ಮಾಮೂಲು. ನೋಡಲು ಬಾಂಗ್ಲಾ ದೇಶದವರಂತೆ ಕಾಣುವುದರಿಂದ ಅವರುಗಳ ಮೇಲೆ ಅನುಮಾನ ಮೂಡಿರುವುದು ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago