ಮೈಸೂರು

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ

ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅವರುಗಳನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಂತರ ಅವರುಗಳು ಬಾಂಗ್ಲಾ ವಲಸಿಗರಲ್ಲ ಎಂಬುದು ದೃಡಪಟ್ಟಿದೆ.

ಭಾನುವಾರ ಬೆಳಿಗ್ಗೆ ಔರಾ ಎಕ್ಸಪ್ರೆಸ್ ರೈಲಿನ ಮೂಲಕ ಸುಮಾರು 34 ಮಂದಿ ಪ್ರಯಾಣಿಕರು ಬಂದಿದ್ದಾರೆ. ಮೈಸೂರು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವರನ್ನು ಸುತ್ತುವರೆದ ಹಿಂದೂ ಜಾಗರಣ ವೇದಿಕೆ ಸದಸ್ಯರು ಅವರುಗಳನ್ನು ಪ್ರಶ್ನಿಸಿದ್ದಾರೆ. ನಂತರ ಅವರುಗಳು ಬಾಂಗ್ಲಾ ದೇಶದ ಪ್ರಜೆಗಳು ಎಂಬ ಅನುಮಾನ ಮೂಡಿದೆ. ತಕ್ಷಣವೇ ಎಲ್ಲ 34 ಮಂದಿಯನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂದ ರೈಲ್ವೇ ಪೊಲೀಸರು ಅವರುಗಳ ಆಧಾರ್ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅದರಲ್ಲಿ ಅವರುಗಳು ಪಶ್ಚಿಮ ಬಂಗಾಳ ಮೂಲದವರು ಎಂಬುದು ಗೊತ್ತಾಗಿದೆ. ಆದರೂ, ಆಧಾರ್ ಕಾರ್ಡ್‌ನ ಪರಿಶೀಲನೆಗಾಗಿ ಗ್ರೇಡ್ 2 ತಹಸೀಲ್ದಾರ ಅವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಸ್ಥಳಕ್ಕೆ ಬಂದ ಅವರು ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದ್ದಾರೆ.

ನಂತರ ಅವರುಗಳು ಪಶ್ಚಿಮ ಬಂಗಾಳದ ನಿವಾಸಿಗಳು ಎಂಬದು ಸಾಬೀತಾಗಿದೆ. ಈ ಸಂಬಂದ ಅವರುಗಳ ಆಧಾರ್ ಕಾರ್ಡ್ ನಕಲನ್ನು ಪಡೆದು, ಅವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡ ಪೊಲೀಸರು ಅವರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

ಕೆಲಸಕ್ಕಾಗಿ ಬಂದವರು
ಇಂದು ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪಶ್ಚಿಮ ಬಂಗಾಳದ ವಲಸಿಗರು ಕಟ್ಟಡ, ವಿದ್ಯುತ್, ಪೇಯಿಂಟಿಂಗ್ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರುಗಳು ವಾರಕ್ಕೆ ಒಮ್ಮೆ ಕೋಲ್ಕತ್ತಾದಿಂದ ಬರುವ ಔರಾ ರೈಲಿನಲ್ಲಿ ಮೈಸೂರಿಗೆ ಬರುತ್ತಾರೆ. ನಂತರ ಮೈಸೂರು ಮೂಲಕ ಮಂಡ್ಯ, ಕೇರಳ, ಮಡಿಕೇರಿ ಭಾಗಗಳಿಗೆ ತೆರಳುವುದು ಮಾಮೂಲು. ನೋಡಲು ಬಾಂಗ್ಲಾ ದೇಶದವರಂತೆ ಕಾಣುವುದರಿಂದ ಅವರುಗಳ ಮೇಲೆ ಅನುಮಾನ ಮೂಡಿರುವುದು ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

6 mins ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

10 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

10 hours ago