ಮೈಸೂರು

ಬೆಂಗಳೂರು ಅರಮನೆ ವಿವಾದ : ಕಾನೂನು ಹೋರಾಟ ಮಾಡ್ತೇವೆ ಎಂದ ಸಂಸದ ಯದುವೀರ

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ ಎಂದು ಮಾಹಿತಿ ಬಂದಿದ್ದು, ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ನಾವು ಕೂಡ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಟಿಡಿಆರ್ ಕೊಟ್ಟು ರಸ್ತೆ ಮಾಡಿ ಎಂದು ಆದೇಶ ನೀಡಿದೆ. ಅದನ್ನು ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದ್ದಾರೆ. ನಾವು ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತೇವೆ ಎಂದರು.

ನಗರದ ಪಾರಂಪರಿಕ ಕಟ್ಟಡಗಳನ್ನು ಸರಿಯಾದ ಕ್ರಮದಲ್ಲಿ ನಿರ್ವಹಣೆ ಮಾಡಿ ಉಳಿಸಿಕೊಳ್ಳಬೇಕು. ಕಳೆದ ೧೦೦ ವರ್ಷಗಳಿಂದ ಅಲ್ಲಿ ಯಾವುದೇ ನಿರ್ವಹಣೆ ಮಾಡಿರಲಿಲ್ಲ. ಪ್ರತಿ ಪಾರಂಪರಿಕ ಕಟ್ಟಡಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಣೆ ಮಾಡಬೇಕು. ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಮತ್ತು ದೇವರಾಜ ಮಾರುಕಟ್ಟೆ ಕಟ್ಟಡಗಳಿಗೆ ಈಗಾಗಲೇ ನಿರ್ವಹಣೆ ಕಾರ್ಯ ಪ್ರಾರಂಭ ಮಾಡಬೇಕು, ಅವುಗಳನ್ನು ಉಳಿಸಿಕೊಳ್ಳಬೇಕು. ಪಾರಂಪರಿಕ ಕಟ್ಟಡಗಳನ್ನು ಕೆಡವಿ ಮತ್ತೆ ಕಟ್ಟುವುದಕ್ಕೆ ನಮ್ಮ ವಿರೋಧವಿದೆ. ಎಲ್ಲ ಕಟ್ಟಡಗಳ ನಿರ್ವಹಣೆ ಮಾಡಿದರೆ ಸಾಕು. ಈ ವಿಚಾರದಲ್ಲಿ ಸರ್ಕಾರ ಬೇಗ ನಿರ್ಧಾರ ಮಾಡಬೇಕು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago