ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.
ತಾಲ್ಲೂಕಿನ ಗಡಿಭಾಗದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು, ರಾತ್ರಿ ವೇಳೆ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಇದನ್ನು ಓದಿ: ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ
ಮಲಗಿರುವ ಮಕ್ಕಳ ಮನೆಗೆ ತೆರಳಿ ವಿದ್ಯಾರ್ಥಿಗಳನ್ನು ಎಬ್ಬಿಸಿ ಓದಲು ಹುರಿದುಂಬಿಸುತ್ತಿದ್ದಾರೆ. ರಾತ್ರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿರುವ ರಾಜು ಅವರು, ಬೆಳಿಗ್ಗೆ ಎದ್ದು ವಿದ್ಯಾರ್ಥಿಗಳ ಮನೆಗೆ ತೆರಳಿ ಯಾವ ಸಮಯದಲ್ಲಿ ಓದಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಪ್ರತಿ ವಾರ ತಾಲ್ಲೂಕಿನ ಒಂದೊಂದು ಶಾಲೆಗೆ ಭೇಟಿ ನೀಡಿ ಅಲ್ಲೇ ವಾಸ್ತವ್ಯ ಹೂಡಲಿರುವ ರಾಜು ಅವರು, ಗ್ರಾಮದ SSLC ವಿದ್ಯಾರ್ಥಿಗಳಿಗೆ ಪಾಠದ ಜೊತೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ.
ಬಿಇಓ ರಾಜು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದ್ದು, ಈ ಬಾರಿ ಎಚ್.ಡಿ.ಕೋಟೆ ತಾಲ್ಲೂಕು ಫಲಿತಾಂಶ ಯಾವ ರೀತಿಯಲ್ಲಿ ಯಶಸ್ವಿಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…