bharat bandh 9 july 2025 how was the response karnataka
ಮೈಸೂರು : ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಕರೆ ನೀಡಿದ ರಾಷ್ಟ್ರವ್ಯಾಪ್ತಿ ಭಾರತ್ ಬಂದ್ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ,ಕೊಡಗು ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿತ್ತು.
ಭಾರತ್ ಬಂದ್ ಇದ್ದರೂ ಕೂಡೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗಡಿ ಮಳಿಗೆಗಳು ತೆರೆದಿದ್ದವು. ಆಟೋ-ಬಸ್ಗಳು ರಸ್ತೆಗಿಳಿದಿದ್ದವು. ಬಹುತೇಕ ಕನ್ನಡಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದವು.
ಹಲವಾರು ಚಳವಳಿಗಳ ಮೂಲಕ ಗಮನ ಸೆಳೆದಿದ್ದ ಮೈಸೂರಿನಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆಗೆ ಮಾತ್ರ ಸೀಮಿತವಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ನ ಮೈದಾನದಲ್ಲಿ ಕಾರ್ಮಿಕ ಸಂಘಟನೆಗಳು ಜಂಟಿ ಸಮಿತಿಯು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಬಂದ್ಗೆ ಮೈಸೂರಿನ ಪ್ರತಿಕ್ರಿಯೆ ಹೀಗಿತ್ತು…
ಬ್ಯಾಂಕ್ಗಳಲ್ಲಿ ಆರ್ಟಿಜಿಎಸ್ ಮೂಲಕ ಹಣ ಸಂದಾಯ ಮಾಡುವುದರಲ್ಲಿ ವ್ಯತ್ಯಯ ಬಿಟ್ಟರೆ ಬೇರೇನೂ ಸಮಸ್ಯೆಗಳು ಕಂಡುಬರಲಿಲ್ಲ. ಎಟಿಎಂಗಳಲ್ಲಿ ಸಾಕಷ್ಟು ಹಣವನ್ನು ಲೋಡ್ ಮಾಡಿರುವುದರಿಂದ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ. ನಗರ, ಸಬ್ ಅರ್ಬನ್ ಬಸ್ ನಿಲ್ದಾಣದಲ್ಲಿ ಬಸ್ಗಳು ಸಂಚಾರ ಎಂದಿನಂತೆ ಇದ್ದರೆ, ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪಾಠವಪ್ರವಚನ ನಡೆಯಿತು.
ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ವೈದ್ಯರು ರೋಗಿಗಳ ತಪಾಸಣೆ ಮಾಡಿದರೆ, ಅಂಚೆ ಕಚೇರಿ ಎಂದಿನಂತೆ ಕಾರ್ಯ ನಿರ್ವಹಿಸಿತು. ರೈಲ್ವೆ ನಿಲ್ದಾಣದಲ್ಲಿ ಎಂದಿನಂತೆ ರೈಲುಗಳು ಓಡಾಡಿದರೆ, ನಗರದ ಹೃದಯ ಭಾಗದ ಎಲ್ಲಾ ರಸ್ತೆಗಳಲ್ಲಿ ಜನಜಂಗುಳಿ, ವಾಹನಗಳ ಓಡಾಟ ಮಾಮೂಲಿಯಂತೆ ಇದ್ದರೆ, ಚಾಮರಾಜೇಂದ್ರ ಮೃಗಾಲಯ, ಅರಮನೆ ವೀಕ್ಷಿಸುವ ಕಾರ್ಯಕ್ಕೂ ಯಾವುದೇ ಅಡ್ಡಿಯಾಗಲಿಲ್ಲ.
ಒಟ್ಟಾರೆ ಯಾವುದೇ ಕಾನೂನುಭಂಗ ತರುವಂತಹ ಕೆಲಸ ನಡೆಯದೆ ಭಾರತ್ ಬಂದ್ ಪ್ರತಿಭಟನೆಗೆ ಸೀಮಿತವಾಗಿತ್ತು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…