ಮೈಸೂರು

ಪ್ರತಿಭಟನೆಗೆ ಸೀಮಿತವಾದ ಭಾರತ್‌ ಬಂದ್‌

ಮೈಸೂರು : ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಕರೆ ನೀಡಿದ ರಾಷ್ಟ್ರವ್ಯಾಪ್ತಿ ಭಾರತ್‌ ಬಂದ್‌ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ,ಕೊಡಗು ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿತ್ತು.

ಭಾರತ್‌ ಬಂದ್‌ ಇದ್ದರೂ ಕೂಡೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗಡಿ ಮಳಿಗೆಗಳು ತೆರೆದಿದ್ದವು. ಆಟೋ-ಬಸ್‌ಗಳು ರಸ್ತೆಗಿಳಿದಿದ್ದವು. ಬಹುತೇಕ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದವು.

ಹಲವಾರು ಚಳವಳಿಗಳ ಮೂಲಕ ಗಮನ ಸೆಳೆದಿದ್ದ ಮೈಸೂರಿನಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆಗೆ ಮಾತ್ರ ಸೀಮಿತವಾಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಮೈದಾನದಲ್ಲಿ ಕಾರ್ಮಿಕ ಸಂಘಟನೆಗಳು ಜಂಟಿ ಸಮಿತಿಯು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ಬಂದ್‌ಗೆ ಮೈಸೂರಿನ ಪ್ರತಿಕ್ರಿಯೆ ಹೀಗಿತ್ತು…

ಬ್ಯಾಂಕ್‌ಗಳಲ್ಲಿ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡುವುದರಲ್ಲಿ ವ್ಯತ್ಯಯ ಬಿಟ್ಟರೆ ಬೇರೇನೂ ಸಮಸ್ಯೆಗಳು ಕಂಡುಬರಲಿಲ್ಲ. ಎಟಿಎಂಗಳಲ್ಲಿ ಸಾಕಷ್ಟು ಹಣವನ್ನು ಲೋಡ್ ಮಾಡಿರುವುದರಿಂದ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ. ನಗರ, ಸಬ್ ಅರ್ಬನ್ ಬಸ್ ನಿಲ್ದಾಣದಲ್ಲಿ ಬಸ್‌ಗಳು ಸಂಚಾರ ಎಂದಿನಂತೆ ಇದ್ದರೆ, ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪಾಠವಪ್ರವಚನ ನಡೆಯಿತು.

ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ವೈದ್ಯರು ರೋಗಿಗಳ ತಪಾಸಣೆ ಮಾಡಿದರೆ, ಅಂಚೆ ಕಚೇರಿ ಎಂದಿನಂತೆ ಕಾರ್ಯ ನಿರ್ವಹಿಸಿತು. ರೈಲ್ವೆ ನಿಲ್ದಾಣದಲ್ಲಿ ಎಂದಿನಂತೆ ರೈಲುಗಳು ಓಡಾಡಿದರೆ, ನಗರದ ಹೃದಯ ಭಾಗದ ಎಲ್ಲಾ ರಸ್ತೆಗಳಲ್ಲಿ ಜನಜಂಗುಳಿ, ವಾಹನಗಳ ಓಡಾಟ ಮಾಮೂಲಿಯಂತೆ ಇದ್ದರೆ, ಚಾಮರಾಜೇಂದ್ರ ಮೃಗಾಲಯ, ಅರಮನೆ ವೀಕ್ಷಿಸುವ ಕಾರ್ಯಕ್ಕೂ ಯಾವುದೇ ಅಡ್ಡಿಯಾಗಲಿಲ್ಲ.

ಒಟ್ಟಾರೆ ಯಾವುದೇ ಕಾನೂನುಭಂಗ ತರುವಂತಹ ಕೆಲಸ ನಡೆಯದೆ ಭಾರತ್‌ ಬಂದ್‌ ಪ್ರತಿಭಟನೆಗೆ ಸೀಮಿತವಾಗಿತ್ತು.

ಕೃಷ್ಣ ರಾಜೇಂದ್ರ ಆಸ್ಪತ್ರೆ ಒಪಿಡಿ ಎಂದಿನಂತೆ ತೆರೆದು ರೋಗಿಗಳನ್ನು ತಪಾಸಣೆ ಮಾಡುತ್ತಿರುವ ದೃಶ್ಯ.

 

ಸಯ್ಯಾಜಿರಾವ್ ರಸ್ತೆಯಲ್ಲಿ ಮೆರವಣಿಗೆ ದೃಶ್ಯ ಕಂಡದ್ದು ಹೀಗೆ..

 

 

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago