bharat bandh 9 july 2025 how was the response karnataka
ಮೈಸೂರು : ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಕರೆ ನೀಡಿದ ರಾಷ್ಟ್ರವ್ಯಾಪ್ತಿ ಭಾರತ್ ಬಂದ್ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ,ಕೊಡಗು ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿತ್ತು.
ಭಾರತ್ ಬಂದ್ ಇದ್ದರೂ ಕೂಡೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗಡಿ ಮಳಿಗೆಗಳು ತೆರೆದಿದ್ದವು. ಆಟೋ-ಬಸ್ಗಳು ರಸ್ತೆಗಿಳಿದಿದ್ದವು. ಬಹುತೇಕ ಕನ್ನಡಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದವು.
ಹಲವಾರು ಚಳವಳಿಗಳ ಮೂಲಕ ಗಮನ ಸೆಳೆದಿದ್ದ ಮೈಸೂರಿನಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆಗೆ ಮಾತ್ರ ಸೀಮಿತವಾಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ನ ಮೈದಾನದಲ್ಲಿ ಕಾರ್ಮಿಕ ಸಂಘಟನೆಗಳು ಜಂಟಿ ಸಮಿತಿಯು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಬಂದ್ಗೆ ಮೈಸೂರಿನ ಪ್ರತಿಕ್ರಿಯೆ ಹೀಗಿತ್ತು…
ಬ್ಯಾಂಕ್ಗಳಲ್ಲಿ ಆರ್ಟಿಜಿಎಸ್ ಮೂಲಕ ಹಣ ಸಂದಾಯ ಮಾಡುವುದರಲ್ಲಿ ವ್ಯತ್ಯಯ ಬಿಟ್ಟರೆ ಬೇರೇನೂ ಸಮಸ್ಯೆಗಳು ಕಂಡುಬರಲಿಲ್ಲ. ಎಟಿಎಂಗಳಲ್ಲಿ ಸಾಕಷ್ಟು ಹಣವನ್ನು ಲೋಡ್ ಮಾಡಿರುವುದರಿಂದ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ. ನಗರ, ಸಬ್ ಅರ್ಬನ್ ಬಸ್ ನಿಲ್ದಾಣದಲ್ಲಿ ಬಸ್ಗಳು ಸಂಚಾರ ಎಂದಿನಂತೆ ಇದ್ದರೆ, ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪಾಠವಪ್ರವಚನ ನಡೆಯಿತು.
ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ವೈದ್ಯರು ರೋಗಿಗಳ ತಪಾಸಣೆ ಮಾಡಿದರೆ, ಅಂಚೆ ಕಚೇರಿ ಎಂದಿನಂತೆ ಕಾರ್ಯ ನಿರ್ವಹಿಸಿತು. ರೈಲ್ವೆ ನಿಲ್ದಾಣದಲ್ಲಿ ಎಂದಿನಂತೆ ರೈಲುಗಳು ಓಡಾಡಿದರೆ, ನಗರದ ಹೃದಯ ಭಾಗದ ಎಲ್ಲಾ ರಸ್ತೆಗಳಲ್ಲಿ ಜನಜಂಗುಳಿ, ವಾಹನಗಳ ಓಡಾಟ ಮಾಮೂಲಿಯಂತೆ ಇದ್ದರೆ, ಚಾಮರಾಜೇಂದ್ರ ಮೃಗಾಲಯ, ಅರಮನೆ ವೀಕ್ಷಿಸುವ ಕಾರ್ಯಕ್ಕೂ ಯಾವುದೇ ಅಡ್ಡಿಯಾಗಲಿಲ್ಲ.
ಒಟ್ಟಾರೆ ಯಾವುದೇ ಕಾನೂನುಭಂಗ ತರುವಂತಹ ಕೆಲಸ ನಡೆಯದೆ ಭಾರತ್ ಬಂದ್ ಪ್ರತಿಭಟನೆಗೆ ಸೀಮಿತವಾಗಿತ್ತು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…