ಮೈಸೂರು

ಪ್ರತಿಭಟನೆಗೆ ಸೀಮಿತವಾದ ಭಾರತ್‌ ಬಂದ್‌

ಮೈಸೂರು : ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಕರೆ ನೀಡಿದ ರಾಷ್ಟ್ರವ್ಯಾಪ್ತಿ ಭಾರತ್‌ ಬಂದ್‌ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ,ಕೊಡಗು ಜಿಲ್ಲೆಗಳು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಸೀಮಿತವಾಗಿತ್ತು.

ಭಾರತ್‌ ಬಂದ್‌ ಇದ್ದರೂ ಕೂಡೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗಡಿ ಮಳಿಗೆಗಳು ತೆರೆದಿದ್ದವು. ಆಟೋ-ಬಸ್‌ಗಳು ರಸ್ತೆಗಿಳಿದಿದ್ದವು. ಬಹುತೇಕ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದವು.

ಹಲವಾರು ಚಳವಳಿಗಳ ಮೂಲಕ ಗಮನ ಸೆಳೆದಿದ್ದ ಮೈಸೂರಿನಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಭೆಗೆ ಮಾತ್ರ ಸೀಮಿತವಾಯಿತು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಮೈದಾನದಲ್ಲಿ ಕಾರ್ಮಿಕ ಸಂಘಟನೆಗಳು ಜಂಟಿ ಸಮಿತಿಯು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ಬಂದ್‌ಗೆ ಮೈಸೂರಿನ ಪ್ರತಿಕ್ರಿಯೆ ಹೀಗಿತ್ತು…

ಬ್ಯಾಂಕ್‌ಗಳಲ್ಲಿ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡುವುದರಲ್ಲಿ ವ್ಯತ್ಯಯ ಬಿಟ್ಟರೆ ಬೇರೇನೂ ಸಮಸ್ಯೆಗಳು ಕಂಡುಬರಲಿಲ್ಲ. ಎಟಿಎಂಗಳಲ್ಲಿ ಸಾಕಷ್ಟು ಹಣವನ್ನು ಲೋಡ್ ಮಾಡಿರುವುದರಿಂದ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ. ನಗರ, ಸಬ್ ಅರ್ಬನ್ ಬಸ್ ನಿಲ್ದಾಣದಲ್ಲಿ ಬಸ್‌ಗಳು ಸಂಚಾರ ಎಂದಿನಂತೆ ಇದ್ದರೆ, ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪಾಠವಪ್ರವಚನ ನಡೆಯಿತು.

ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ವೈದ್ಯರು ರೋಗಿಗಳ ತಪಾಸಣೆ ಮಾಡಿದರೆ, ಅಂಚೆ ಕಚೇರಿ ಎಂದಿನಂತೆ ಕಾರ್ಯ ನಿರ್ವಹಿಸಿತು. ರೈಲ್ವೆ ನಿಲ್ದಾಣದಲ್ಲಿ ಎಂದಿನಂತೆ ರೈಲುಗಳು ಓಡಾಡಿದರೆ, ನಗರದ ಹೃದಯ ಭಾಗದ ಎಲ್ಲಾ ರಸ್ತೆಗಳಲ್ಲಿ ಜನಜಂಗುಳಿ, ವಾಹನಗಳ ಓಡಾಟ ಮಾಮೂಲಿಯಂತೆ ಇದ್ದರೆ, ಚಾಮರಾಜೇಂದ್ರ ಮೃಗಾಲಯ, ಅರಮನೆ ವೀಕ್ಷಿಸುವ ಕಾರ್ಯಕ್ಕೂ ಯಾವುದೇ ಅಡ್ಡಿಯಾಗಲಿಲ್ಲ.

ಒಟ್ಟಾರೆ ಯಾವುದೇ ಕಾನೂನುಭಂಗ ತರುವಂತಹ ಕೆಲಸ ನಡೆಯದೆ ಭಾರತ್‌ ಬಂದ್‌ ಪ್ರತಿಭಟನೆಗೆ ಸೀಮಿತವಾಗಿತ್ತು.

ಕೃಷ್ಣ ರಾಜೇಂದ್ರ ಆಸ್ಪತ್ರೆ ಒಪಿಡಿ ಎಂದಿನಂತೆ ತೆರೆದು ರೋಗಿಗಳನ್ನು ತಪಾಸಣೆ ಮಾಡುತ್ತಿರುವ ದೃಶ್ಯ.

 

ಸಯ್ಯಾಜಿರಾವ್ ರಸ್ತೆಯಲ್ಲಿ ಮೆರವಣಿಗೆ ದೃಶ್ಯ ಕಂಡದ್ದು ಹೀಗೆ..

 

 

 

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

7 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago