ಮೈಸೂರು

40% ಕಮಿಷನ್ ಆರೋಪ ನಾವು ಮಾಡಿದ್ದಲ್ಲ ಡಿ ಕೆ ಶಿವಕುಮಾರ್

ಮೈಸೂರು: ಭಾರತ್ ಜೋಡೋ ಯಾತ್ರೆ  ಬಗ್ಗೆ ಬಿಜೆಪಿ ಅಪಪ್ರಚಾರಕ್ಕೆ ನಾವು ಬಗ್ಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್) ಹೇಳಿದರು. ಶನಿವಾರ ಮೈಸೂರಿನ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿ ಬಿಜೆಪಿಗೆ ತಿರುಗೇಟು ನೀಡಿದರು.

ಅದ್ಭುತವಾದ ಬೆಳವಣಿಗೆ ದೇಶದಲ್ಲಿ ನಡೆಯುತ್ತಿದೆ. ಭಾರತ್ ಐಕ್ಯತಾ ಯಾತ್ರೆ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ, ಬದಲಾಗಿ ಭಾರತದಲ್ಲಿ ಆಗುತ್ತಿರುವ ವೈಮನಸ್ಸಿಗೆ ಉತ್ತರ ಕಂಡು‌ಹಿಡಿಯುವ ಕೆಲಸ‌ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. 40% ಕಮಿಷನ್ ಆರೋಪ ನಾವು ಮಾಡಿದ್ದಲ್ಲ. ಗುತ್ತಿಗೆದಾರರ ಸಂಘ ಹೇಳಿದ್ದನ್ನು ಜನರ ಮುಂದೆ ಇಟ್ಟಿದ್ದೇವೆ. ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದೆ. ಜೊತೆಗೆ ಭ್ರಷ್ಟಾಚಾ ರ ಹೆಚ್ಚಾಗಿದೆ ಎಂದು ಆರೋಪಿಸಿದರು

ದೇಶದಲ್ಲಿ ಇರುವ ನಿರುದ್ಯೋಗದ ಬಗ್ಗೆ ಮಾಧ್ಯಮಗಳೇ ಹೇಳುತ್ತಿವೆ. ಈಗ ಭಯದ ವಾತಾವರಣದಲ್ಲಿ ನಾವು ಬದು ಕುತ್ತಿದ್ದೇವೆ. ದ್ವೇಷ ಅಸೂಯೆ ಹೋಗಿಸಲು ಇಂತಹ ಯಾತ್ರೆಯ ಮೂಲಕ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಭಾರತ್ ಜೋಡೋ ಯಾತ್ರೆಯ ವಿರುದ್ಧ ಮಾಧ್ಯಮವೊಂದರಲ್ಲಿ ದೊಡ್ಡದಾದ ಜಾಹೀರಾತು ನೀಡಲಾಗಿದೆ. ನಮ್ಮ ಬೆಳವಣಿಗೆ ಸಹಿಸದೆ ದೊಡ್ಡ ಜಾಹೀರಾತು ಕೊಟ್ಟಿದ್ದಾರೆ. ಆದರೆ ಇದಕ್ಕೆ ನಾವು ಜಗ್ಗಲ್ಲ, ಬಗ್ಗಲ್ಲ ನಮ್ಮ ಕೆಲಸ ನಾವು ಮಾಡುತ್ತೇವೆ.ಜನರ ಧ್ವನಿಯಾಗಿ ನಾವು ಕೆಲಸ ಮಾಡುತ್ತೇವೆ ಎಂದರು. ಭಾರತ್ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಶನಿವಾರ ರಾಹುಲ್ ಗಾಂಧಿ 25 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಪಾದಯಾತ್ರೆ ಮತ್ತೆ ಆರಂಭಗೊಂಡಿದೆ.

 

andolana

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

55 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

57 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

59 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

1 hour ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

1 hour ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

1 hour ago