ಮೈಸೂರು: ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ಅಪಪ್ರಚಾರಕ್ಕೆ ನಾವು ಬಗ್ಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್) ಹೇಳಿದರು. ಶನಿವಾರ ಮೈಸೂರಿನ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿ ಬಿಜೆಪಿಗೆ ತಿರುಗೇಟು ನೀಡಿದರು.
ಅದ್ಭುತವಾದ ಬೆಳವಣಿಗೆ ದೇಶದಲ್ಲಿ ನಡೆಯುತ್ತಿದೆ. ಭಾರತ್ ಐಕ್ಯತಾ ಯಾತ್ರೆ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ, ಬದಲಾಗಿ ಭಾರತದಲ್ಲಿ ಆಗುತ್ತಿರುವ ವೈಮನಸ್ಸಿಗೆ ಉತ್ತರ ಕಂಡುಹಿಡಿಯುವ ಕೆಲಸ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. 40% ಕಮಿಷನ್ ಆರೋಪ ನಾವು ಮಾಡಿದ್ದಲ್ಲ. ಗುತ್ತಿಗೆದಾರರ ಸಂಘ ಹೇಳಿದ್ದನ್ನು ಜನರ ಮುಂದೆ ಇಟ್ಟಿದ್ದೇವೆ. ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದೆ. ಜೊತೆಗೆ ಭ್ರಷ್ಟಾಚಾ ರ ಹೆಚ್ಚಾಗಿದೆ ಎಂದು ಆರೋಪಿಸಿದರು
ದೇಶದಲ್ಲಿ ಇರುವ ನಿರುದ್ಯೋಗದ ಬಗ್ಗೆ ಮಾಧ್ಯಮಗಳೇ ಹೇಳುತ್ತಿವೆ. ಈಗ ಭಯದ ವಾತಾವರಣದಲ್ಲಿ ನಾವು ಬದು ಕುತ್ತಿದ್ದೇವೆ. ದ್ವೇಷ ಅಸೂಯೆ ಹೋಗಿಸಲು ಇಂತಹ ಯಾತ್ರೆಯ ಮೂಲಕ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಭಾರತ್ ಜೋಡೋ ಯಾತ್ರೆಯ ವಿರುದ್ಧ ಮಾಧ್ಯಮವೊಂದರಲ್ಲಿ ದೊಡ್ಡದಾದ ಜಾಹೀರಾತು ನೀಡಲಾಗಿದೆ. ನಮ್ಮ ಬೆಳವಣಿಗೆ ಸಹಿಸದೆ ದೊಡ್ಡ ಜಾಹೀರಾತು ಕೊಟ್ಟಿದ್ದಾರೆ. ಆದರೆ ಇದಕ್ಕೆ ನಾವು ಜಗ್ಗಲ್ಲ, ಬಗ್ಗಲ್ಲ ನಮ್ಮ ಕೆಲಸ ನಾವು ಮಾಡುತ್ತೇವೆ.ಜನರ ಧ್ವನಿಯಾಗಿ ನಾವು ಕೆಲಸ ಮಾಡುತ್ತೇವೆ ಎಂದರು. ಭಾರತ್ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಶನಿವಾರ ರಾಹುಲ್ ಗಾಂಧಿ 25 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಪಾದಯಾತ್ರೆ ಮತ್ತೆ ಆರಂಭಗೊಂಡಿದೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…