ಮೈಸೂರು: ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ಅಪಪ್ರಚಾರಕ್ಕೆ ನಾವು ಬಗ್ಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್) ಹೇಳಿದರು. ಶನಿವಾರ ಮೈಸೂರಿನ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿ ಬಿಜೆಪಿಗೆ ತಿರುಗೇಟು ನೀಡಿದರು.
ಅದ್ಭುತವಾದ ಬೆಳವಣಿಗೆ ದೇಶದಲ್ಲಿ ನಡೆಯುತ್ತಿದೆ. ಭಾರತ್ ಐಕ್ಯತಾ ಯಾತ್ರೆ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ, ಬದಲಾಗಿ ಭಾರತದಲ್ಲಿ ಆಗುತ್ತಿರುವ ವೈಮನಸ್ಸಿಗೆ ಉತ್ತರ ಕಂಡುಹಿಡಿಯುವ ಕೆಲಸ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. 40% ಕಮಿಷನ್ ಆರೋಪ ನಾವು ಮಾಡಿದ್ದಲ್ಲ. ಗುತ್ತಿಗೆದಾರರ ಸಂಘ ಹೇಳಿದ್ದನ್ನು ಜನರ ಮುಂದೆ ಇಟ್ಟಿದ್ದೇವೆ. ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದೆ. ಜೊತೆಗೆ ಭ್ರಷ್ಟಾಚಾ ರ ಹೆಚ್ಚಾಗಿದೆ ಎಂದು ಆರೋಪಿಸಿದರು
ದೇಶದಲ್ಲಿ ಇರುವ ನಿರುದ್ಯೋಗದ ಬಗ್ಗೆ ಮಾಧ್ಯಮಗಳೇ ಹೇಳುತ್ತಿವೆ. ಈಗ ಭಯದ ವಾತಾವರಣದಲ್ಲಿ ನಾವು ಬದು ಕುತ್ತಿದ್ದೇವೆ. ದ್ವೇಷ ಅಸೂಯೆ ಹೋಗಿಸಲು ಇಂತಹ ಯಾತ್ರೆಯ ಮೂಲಕ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಭಾರತ್ ಜೋಡೋ ಯಾತ್ರೆಯ ವಿರುದ್ಧ ಮಾಧ್ಯಮವೊಂದರಲ್ಲಿ ದೊಡ್ಡದಾದ ಜಾಹೀರಾತು ನೀಡಲಾಗಿದೆ. ನಮ್ಮ ಬೆಳವಣಿಗೆ ಸಹಿಸದೆ ದೊಡ್ಡ ಜಾಹೀರಾತು ಕೊಟ್ಟಿದ್ದಾರೆ. ಆದರೆ ಇದಕ್ಕೆ ನಾವು ಜಗ್ಗಲ್ಲ, ಬಗ್ಗಲ್ಲ ನಮ್ಮ ಕೆಲಸ ನಾವು ಮಾಡುತ್ತೇವೆ.ಜನರ ಧ್ವನಿಯಾಗಿ ನಾವು ಕೆಲಸ ಮಾಡುತ್ತೇವೆ ಎಂದರು. ಭಾರತ್ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಶನಿವಾರ ರಾಹುಲ್ ಗಾಂಧಿ 25 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಪಾದಯಾತ್ರೆ ಮತ್ತೆ ಆರಂಭಗೊಂಡಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…