ಮೈಸೂರು

ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

ಮೈಸೂರು : ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.

ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಅಂದರೆ ಸೆಪ್ಟೆ.ಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನು ಓದಿ : ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರ ಸಂತಾಪ

ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಭೈರಪ್ಪ ಅವರ ಪಾರ್ತೀವ ಶರೀರವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸಲಾಗಿದ್ದು. ನಾಳೆ (ಸೆಪ್ಟೆಂಬರ್ 25) ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುತ್ತದೆ.

ಇನ್ನು ನಾಳೆ (ಸೆಪ್ಟೆಂಬರ್ 25) ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆಯಾದರೂ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರ. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ. ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago