ಮೈಸೂರು

ಬೈಕ್‌ ರೇಸಿಂಗ್‌ : ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್‌ ಇಲಾಖೆ

ಮೈಸೂರು : ಬೈಕ್ ರೇಸಿಂಗ್ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಬಲಿಯಾದ ಕಾರ್ತಿಕ್ ಎಂಬ ಯುವಕನ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರು ನಗರದ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವ್ಹೀಲಿಂಗ್, ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ನಗರದ ಎನ್.ಆರ್. ಸಂಚಾರ, ಸಿದ್ದಾರ್ಥ ಸಂಚಾರ, ಕೃಷ್ಣರಾಜ ಹಾಗೂ ವಿವಿ ಮೊಹಲ್ಲಾ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳು ಹಾಗೂ ವರ್ತುಲ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರು, ರೇಸಿಂಗ್ ಮಾಡುವವರನ್ನು ಇನ್ನು ಮುಂದೆ ಪೊಲೀಸರು ಹೆಡೆಮುರಿ ಕಟ್ಟಲಿದ್ದಾರೆ.

ಈ ಸಂಬಂಧ ಸೋಮವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಭಾನುವಾರ ಮುಂಜಾನೆ ನಡೆದ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತಂಡ ರಚನೆ: ಹೆಚ್ಚಾಗಿ ರಾತ್ರಿ ವೇಳೆಯಲ್ಲಿಯೇ ಯುವಕರು ಬೈಕ್ ವ್ಹೀಲಿಂಗ್ ಹಾಗೂ ರೇಸಿಂಗ್ ನಡೆಸುತ್ತಾರೆ. ಕೆಲವೊಮ್ಮೆ ಹಗಲಿನಲ್ಲಿ ಕೂಡ ಪ್ರಮುಖ ರಸ್ತೆಗಳಲ್ಲಿ ಯುವಕರು ವ್ಹೀಲಿಂಗ್ ನಡೆಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುವುದುಂಟು.
ಹೀಗಾಗಿ ಆಯುಕ್ತರು ಇಂತಹವರನ್ನು ಹದ್ದುಬಸ್ತಿನಲ್ಲಿಡಲು ಪೊಲೀಸರ ತಂಡ ರಚನೆ ಮಾಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಓರ್ವ ಎಎಸ್‌ಐ ನೇತೃತ್ವದಲ್ಲಿ ಐವರು ಪೊಲೀಸರ ತಂಡವನ್ನು ರಚನೆ ಮಾಡಿದ್ದಾರೆ.

ನಿತ್ಯ ಎರಡು ಪಾಳಿಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ತಂಡ ಹಾಗೂ ರಾತ್ರಿ ವೇಳೆ ಒಂದು ತಂಡ ಆಯಾ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ನಿಗಾ ವಹಿಸಲಿದೆ. ತಪ್ಪು ಮಾಡಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಸಲಿದೆ.

ಕರ್ಕಶ ಶಬ್ಧ: ಇದೇ ವೇಳೆ ನಗರದಾದ್ಯಂತ ಕಳೆದ ಆರು ತಿಂಗಳ ಅವಧಿಯಲ್ಲಿ ಕರ್ಕಶ ಶಬ್ಧ ಮಾಡವ ಸೈಲೆನ್ಸರ್ ಅಳವಡಿಸಿಕೊಂಡಿದ್ದ 324 ಬೈಕ್‌ಗಳನ್ನು ವಶಕ್ಕೆ ಪಡೆದು ಸೈಲೆನ್ಸರ್‌ಗಳನ್ನು ನಾಶ ಪಡಿಸಲಾಗಿದೆ. ಈ ಕಾರ್ಯಾಚರಣೆ ಸೋಮವಾರದಿಂದ ಪುನಾರಂಭವಾಗಲಿದೆ.

20 ಪ್ರಕರಣಗಳು: ನಗರದ ಎನ್.ಆರ್., ಸಿದ್ದಾರ್ಥ, ಕೆ.ಆರ್. ಹಾಗೂ ವಿವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವ್ಹೀಲಿಂಗ್ ಹಾಗೂ ರೇಸಿಂಗ್‌ನಲ್ಲಿ ತೊಡಗಿದ್ದ ೨೦ ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆ ಕೂಡ ಸೋಮವಾರದಿಂದ ವೇಗ ಪಡೆದುಕೊಳ್ಳಲಿದೆ.

ಜಾಗೃತಿ ಕಾರ್ಯಕ್ರಮ: ಇದೇ ವೇಳೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಮಕ್ಕಳಿಗೆ ಬೈಕ್ ಕೊಡಿಸುವ ಮುನ್ನ ಜಾಗೃತರಾಗಿರುವಂತೆ ಜನರಿಗೆ ತಿಳಿಹೇಳುವ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಆಯುಕ್ತರು ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

22 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

53 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago