Mysore
28
clear sky

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಬಸ್ ಗೆ ಕಲ್ಲು ತೂರಿದ ಬೈಕ್ ಸವಾರರು : ಪ್ರಕರಣ ದಾಖಲು

ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್‌ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ.

ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್‌ ನ ಕಿಟಕಿ ಗಾಜಿಗೆ ಹಾನಿಯಾಗಿದೆ. ಮೂಡಗೆರೆ, ಹಾಸನ, ಕೆ.ಆರ್.ನಗರ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರ ಮಲ್ಲಿನಾಥಪುರ ಬಳಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಸವಾರರು ಬಸ್‌ ಗೆ ಕಲ್ಲು ಹೊಡೆದು ಕಿಟಕಿ ಗಾಜಿಗೆ ಹಾನಿ ಮಾಡಿದ್ದಾರೆ ಎಂದು ಚಾಲಕ ಲೋಕೇಶ್ ಬಿಳಿಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೈಕ್ ಸವಾರರ ಪತ್ತೆಗೆ ಕ್ರಮ ವಹಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!