Biker dies in tractor collision
ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ ಅಲಿಯಾಸ್ ಬಸವಣ್ಣ ಮೃತಪಟ್ಟವರು.
ಕುಮಾರ್ ಅವರು ಶನಿವಾರ ರಾತ್ರಿ 10:20 ರ ಸಮಯದಲ್ಲಿ ತಿ.ನರಸೀಪುರ ಪಟ್ಟಣದಿಂದ ಸ್ವಗ್ರಾಮ ಹೆಳವರ ಹುಂಡಿ ಗ್ರಾಮಕ್ಕೆ ಬೈಕ್ನಲ್ಲಿ ನಂಜನಗೂಡು ಏಕಮುಖ ರಸ್ತೆಯಲ್ಲಿ ಎಡ ಭಾಗದಲ್ಲಿ ಹೋಗುತ್ತಿದ್ದ ವೇಳೆ ಹೆಳವರಹುಂಡಿ ಗ್ರಾಮದ ಕಡೆಯಿಂದ ಏಕಮುಖ ಸಂಚಾರವಿದ್ದರೂ ಬಲಭಾಗದಲ್ಲಿ ಟ್ರಾಕ್ಟರ್ಅನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ತೀವ್ರವಾದ ಗಾಯಗಳಾಗಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಸ್ನೇಹಿತರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಅಪಘಾತ ಮಾಡಿದ ಟ್ರಾಕ್ಟರ್ ಚಾಲಕ ರಸ್ತೆಯಲ್ಲಿಯೇ ಟ್ರಾಕ್ಟರ್ ಹಾಗೂ ಟ್ರಾಲಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಮೃತ ಕುಮಾರನ ಸಹೋದರ ಸೋಮಶೇಖರ್ ಪಟ್ಟಣ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…