ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33) ಕೊಲೆಯಾದ ಮಹಿಳೆ. ದಿ.ಪೀರನಾಯಕ ಪುತ್ರ ಸ್ವಾಮಿನಾಯಕ ಕೊಲೆ ಆರೋಪಿ.
ಕೋಲೆ ಆರೋಪಿ ಸ್ವಾಮಿನಾಯಕ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಮನೆಯಲ್ಲಿ ಆಗಾಗ್ಗೆ ಗಲಾಟೆ ಸಹ ನಡೆಯುತ್ತಿತ್ತು. ಇಂದು ಮಧ್ಯಾಹ್ನಾ ಮನೆಯಲ್ಲಿ ಗಲಾಟೆ ಆರಂಭವಾಗಿ ಪತ್ರಿ ರೋಜಾಳನ್ನು ಮಾರಕಾಸ್ರ್ತದಿಂದ ಹತೈಗೈದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ಘಟನೆ ವಿವರ: ಬೆಂಕಿಪುರ ಗ್ರಾಮದ ಸ್ವಾಮಿನಾಯಕನಿಗೆ 12 ವರ್ಷಗಳ ಹಿಂದೆ ಅದೇ ಗ್ರಾಮದ ರೋಜಾ ಅವರೊಂದಿಗೆ ವಿವಾಹವಾಗಿ ಎರಡು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದನು. ಸ್ವಾಮಿನಾಯಕ ಹೊಂದಿದ್ದ ಎನ್ನಲಾದ ಅಕ್ರಮ ಸಂಬಂಧದ ಬಗ್ಗೆ ದಂಪತಿಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ರೋಜಾ ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿರುವ ತನ್ನ ತಾಯಿ ಮನೆಗೆ ಹೋಗಿದ್ದರು.
ಭಾನುವಾರ ಬೆಳಿಗ್ಗೆ ಬೀದಿ ನಲ್ಲಿಯಲ್ಲಿ ರೋಜಾ ನೀರು ತರಲು ಹೋಗಿದ್ದ ವೇಳೆ ತೆಂಗಿನ ಕಾಯಿ ಕೀಳುವ ಕತ್ತಿ ಹಿಡಿದು ಬಂದ ಸ್ವಾಮಿನಾಯಕ ಏಕಾಏಕಿ ರೋಜಾ ಅವರ ಬೆನ್ನು, ಕುತ್ತಿಗೆ ಮತ್ತಿತರ ಕಡೆಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಜಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ನಂತರ ಆರೋಪಿ ಬಿಳಿಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…