ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33) ಕೊಲೆಯಾದ ಮಹಿಳೆ. ದಿ.ಪೀರನಾಯಕ ಪುತ್ರ ಸ್ವಾಮಿನಾಯಕ ಕೊಲೆ ಆರೋಪಿ.
ಕೋಲೆ ಆರೋಪಿ ಸ್ವಾಮಿನಾಯಕ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಮನೆಯಲ್ಲಿ ಆಗಾಗ್ಗೆ ಗಲಾಟೆ ಸಹ ನಡೆಯುತ್ತಿತ್ತು. ಇಂದು ಮಧ್ಯಾಹ್ನಾ ಮನೆಯಲ್ಲಿ ಗಲಾಟೆ ಆರಂಭವಾಗಿ ಪತ್ರಿ ರೋಜಾಳನ್ನು ಮಾರಕಾಸ್ರ್ತದಿಂದ ಹತೈಗೈದು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.
ಘಟನೆ ವಿವರ: ಬೆಂಕಿಪುರ ಗ್ರಾಮದ ಸ್ವಾಮಿನಾಯಕನಿಗೆ 12 ವರ್ಷಗಳ ಹಿಂದೆ ಅದೇ ಗ್ರಾಮದ ರೋಜಾ ಅವರೊಂದಿಗೆ ವಿವಾಹವಾಗಿ ಎರಡು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದನು. ಸ್ವಾಮಿನಾಯಕ ಹೊಂದಿದ್ದ ಎನ್ನಲಾದ ಅಕ್ರಮ ಸಂಬಂಧದ ಬಗ್ಗೆ ದಂಪತಿಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ರೋಜಾ ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿರುವ ತನ್ನ ತಾಯಿ ಮನೆಗೆ ಹೋಗಿದ್ದರು.
ಭಾನುವಾರ ಬೆಳಿಗ್ಗೆ ಬೀದಿ ನಲ್ಲಿಯಲ್ಲಿ ರೋಜಾ ನೀರು ತರಲು ಹೋಗಿದ್ದ ವೇಳೆ ತೆಂಗಿನ ಕಾಯಿ ಕೀಳುವ ಕತ್ತಿ ಹಿಡಿದು ಬಂದ ಸ್ವಾಮಿನಾಯಕ ಏಕಾಏಕಿ ರೋಜಾ ಅವರ ಬೆನ್ನು, ಕುತ್ತಿಗೆ ಮತ್ತಿತರ ಕಡೆಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಜಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ನಂತರ ಆರೋಪಿ ಬಿಳಿಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…