ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago