ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

5 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

6 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

6 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago