ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago