ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

2 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

2 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

2 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago