ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

54 mins ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

2 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

2 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

9 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

9 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

9 hours ago