ಮೈಸೂರು

ಎಚ್.ಡಿ.ಕೋಟೆ| ಹಕ್ಕಿಜ್ವರ ಭೀತಿ: ಬಾವಲಿ ಚೆಕ್‌ಪೋಸ್ಟ್‌ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಭೇಟಿ

ಎಚ್.ಡಿ.ಕೋಟೆ: ರಾಜ್ಯದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಂದು ಎಚ್‌.ಡಿ.ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಹಾಗೂ ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅವರು ಕರ್ನಾಟಕ ಕೇರಳ ಭಾಗವಾದ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್ ಅವರು, ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರವು ವೈರಸ್‌ನಿಂದ ಹರಡುವ ರೋಗ. ಟರ್ಕಿ ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಕಾಯಿಲೆ. ಇದೊಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹರಡುತ್ತದೆ. ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ರೋಗಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಇಕ್ಕೆಗಳು ಮನುಷ್ಯರು ಕುಡಿಯುವ ನೀರಿನಲ್ಲಿ ಬೆರೆತು ಕಲುಷಿತ ಗೊಂಡಾಗ ಈ ಕಾಯಿಲೆ ಹರಡುತ್ತದೆ. ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ಈ ರೋಗ ಲಕ್ಷಣಗಳ ಬಗ್ಗೆ ತಿಳಿಸಿದ ಅವರು, ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1 ಎನ್1 ಜ್ವರದ ಲಕ್ಷಣಗಳಂತೆ ಇರುತ್ತದೆ. ಜ್ವರ ಮತ್ತು ಕೆಮ್ಮು, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು ಹಾಗೂ ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಬೇಧಿಯು ಆಗಬಹುದು. ಉಸಿರಾಟದಲ್ಲಿ ತೊಂದರೆ ಕೂಡ ಆಗಬಹುದು ಎಂದು ಮಾಹಿತಿ ನೀಡಿದರು.

ಇನ್ನೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ ಅವರು,
* ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ನಾಗರಿಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಹಕ್ಕಿ ಜ್ವರ ಸೋಂಕು ಹರಡದಂತೆ ತಡೆಯಬಹುದು.
* ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸುವುದು.
* ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು.
* ಹಕ್ಕಿ ಜ್ವರ ಶಂಕಿತ ಅಥವಾ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು.
* ಯಾವುದೇ ಜ್ವರವು ಕಾಣಿಸಿಕೊಂಡರು ತಕ್ಷಣ ಸ್ಥಳೀಯ ಆಶಾ ಕಾರ್ಯಕರ್ತರಿಗೆ ತಿಳಿಸಿ ಮತ್ತು ಡಿ.ಬಿ.ಕುಪ್ಪೆ ಪ್ರಾಥಮಿಕ ಆರೋಗ್ಯದ ವೈದ್ಯಾಧಿಕಾರಿಗಳ ಹತ್ತಿರ ಹೋಗಿ ಪರೀಕ್ಷೆ ಮಾಡಿಸಿ ಎಂದು ತಿಳಿಸಿದರು

ನಂತರ ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅವರು ಮಾತನಾಡಿ, ನಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡು ಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಾವು ಎಲ್ಲಾ ಕೋಳಿ ಫಾರಂಗಳಿಗೆ ಭೇಟಿ ನೀಡಿ ಮಾಹಿತಿ ನೀಡುತ್ತಿದ್ದೇವೆ. ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಿ ವಾಹನಗಳ ತಪಾಸಣೆ ಮಾಡಿ ಸ್ಪ್ರೇಯಿಂಗ್ ಮಾಡುತ್ತಿದ್ದೇವೆ. ಯಾವುದೇ ಕೋಳಿ ಹಾಗೂ ಪಕ್ಷಿಗಳು ಸತ್ತಿರುವುದು ಕಂಡು ಬಂದರೆ ತಕ್ಷಣ ಸ್ಥಳೀಯ ಪಶು ಸಂಗೋಪನ ಇಲಾಖೆಗೆ ತಿಳಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಪಶುಸಂಗೋಪನಾ ಇಲಾಖೆಯ ಸಿಬ್ಬಂದಿ ವರ್ಗದವರಾದ ರವಿ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago