ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ.
ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ವಕ್ತಾರ ಹೆಚ್ ಎ ವೆಂಕಟೇಶ್ ದೂರಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…