ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿದಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಹಾಗೆಂದು ಎಎಪಿ ಪಕ್ಷ ಹಾಗೂ ಕಮ್ಯುನಿಷ್ಟ್ ಪಕ್ಷದವರೇ ಹೇಳುತ್ತಿದ್ದಾರೆ. ಈ ಎರಡೂ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತಗಟ್ಟೆ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದರು.
ಅಮಿಶ್ ಶಾ ಅವರೇ ನಿಮ್ಮಲ್ಲಿರುವಷ್ಟು ಭಿನ್ನಾಭಿಪ್ರಾಯ, ಕಿತ್ತಾಟ ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ನಾನು ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿದ್ದೇವೆ. ಇಡೀ ಸಚಿವ ಸಂಪುಟ ಒಗ್ಗಟ್ಟಾಗಿದೆ. ಸರ್ಕಾರವನ್ನು ಯಶಸ್ವಿಯಗಿ ಮುನ್ನಡೆಸುತ್ತಿದ್ದೇವೆ. ಅಧಿಕಾರಕ್ಕೆ ನಾನು ಕಾದಿರುವೆ ಎಂಬುದು ನಿಮ್ಮ ಭ್ರಮೆ ಎಂದು ತಿರುಗೇಟು ನೀಡಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…