ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅತಿಯಾದ ಶುಲ್ಕ ವಿಧಿಸುವ ಮೂಲಕ ಹಿಂದೂ ಭಕ್ತರನ್ನು ಶೋಷಿಸುತ್ತಿದ್ದಾರೆಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಆರೋಪಿಸಿದ್ದಾರೆ.
ಬಂಟ್ವಾಳದಲ್ಲಿ ಉರೂಸ್ ಆಚರಣೆಗೆ ರೂ.4 ಕೋಟಿ ಮೀಸಲಿಟ್ಟು, ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಮುಂದುವರೆಸಿರುವ ಸರ್ಕಾರ, ಹಿಂದೂಗಳನ್ನು ಶೋಷಿಸುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಈ ಶುಲ್ಕದ ಮೂಲಕ ಹಣ ಸಂಗ್ರಹಿಸಲು ಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ದಸರಾ ಆಚರಣೆಗೆ ರೂ.41.7 ಕೋಟಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳಿದೆ. ಈ ಬಗ್ಗೆ ವಿವರ ಬಿಡುಗಡೆ ಮಾಡಲು ಜಿಲ್ಲಾಳಿತ ಮಂಡಳಿ 10 ತಿಂಗಳು ಸಮಯ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಸಾಮಾಜಿಕ-ಆರ್ಥಿಕ ಮರು ಸಮೀಕ್ಷೆಯನ್ನು ಘೋಷಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದ್ರೋಹ ಮಾಡಿದ್ದಾರೆ. ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಜನರಿಗೆ ಪದೇ ಪದೇ ವಂಚಿಸಿದ್ದಾರೆ. ಹಿಂದೆ ಸಮೀಕ್ಷೆಗೆ ಖರ್ಚು ಮಾಡಿದ 165 ಕೋಟಿ ರೂಪಾಯಿ ಸಾರ್ವಜನಿಕ ಹಣ ವ್ಯರ್ಥವಾಗಿದ್ದು, ಅದನ್ನು ಸಿದ್ದರಾಮಯ್ಯ ಅವರು ಮರುಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರವು ಜನಗಣತಿ ಅಧಿಕಾರವನ್ನು ಹೊಂದಿರುವುದರಿಂದ, ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯಕ್ಕೆ ಇಲ್ಲ. ಸಿದ್ದರಾಮಯ್ಯ ಅವರು ತೊಂದರೆಯಲ್ಲಿ ಸಿಲುಕಿದಾಗಲೆಲ್ಲಾ ಹಿಂದುಳಿದ ವರ್ಗಗಳು ಅಥವಾ ಜಾತಿ ಜನಗಣತಿಗೆ ಸಂಬಂಧಿಸಿದ ವಿಷಯಗಳನ್ನು ಎತ್ತುತ್ತಿದ್ದಾರೆಂದೂ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…