ಮೈಸೂರು

ಚಾ.ಬೆಟ್ಟ | ವಿಶೇಷ ದರ್ಶನಕ್ಕೆ ರೂ.2000 ದರ ನಿಗದಿ ; ಬಿಜೆಪಿ ಕಿಡಿ

ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅತಿಯಾದ ಶುಲ್ಕ ವಿಧಿಸುವ ಮೂಲಕ ಹಿಂದೂ ಭಕ್ತರನ್ನು ಶೋಷಿಸುತ್ತಿದ್ದಾರೆಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಆರೋಪಿಸಿದ್ದಾರೆ.

ಬಂಟ್ವಾಳದಲ್ಲಿ ಉರೂಸ್ ಆಚರಣೆಗೆ ರೂ.4 ಕೋಟಿ ಮೀಸಲಿಟ್ಟು, ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಮುಂದುವರೆಸಿರುವ ಸರ್ಕಾರ, ಹಿಂದೂಗಳನ್ನು ಶೋಷಿಸುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಈ ಶುಲ್ಕದ ಮೂಲಕ ಹಣ ಸಂಗ್ರಹಿಸಲು ಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ದಸರಾ ಆಚರಣೆಗೆ ರೂ.41.7 ಕೋಟಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳಿದೆ. ಈ ಬಗ್ಗೆ ವಿವರ ಬಿಡುಗಡೆ ಮಾಡಲು ಜಿಲ್ಲಾಳಿತ ಮಂಡಳಿ 10 ತಿಂಗಳು ಸಮಯ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಸಾಮಾಜಿಕ-ಆರ್ಥಿಕ ಮರು ಸಮೀಕ್ಷೆಯನ್ನು ಘೋಷಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದ್ರೋಹ ಮಾಡಿದ್ದಾರೆ. ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಜನರಿಗೆ ಪದೇ ಪದೇ ವಂಚಿಸಿದ್ದಾರೆ. ಹಿಂದೆ ಸಮೀಕ್ಷೆಗೆ ಖರ್ಚು ಮಾಡಿದ 165 ಕೋಟಿ ರೂಪಾಯಿ ಸಾರ್ವಜನಿಕ ಹಣ ವ್ಯರ್ಥವಾಗಿದ್ದು, ಅದನ್ನು ಸಿದ್ದರಾಮಯ್ಯ ಅವರು ಮರುಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರವು ಜನಗಣತಿ ಅಧಿಕಾರವನ್ನು ಹೊಂದಿರುವುದರಿಂದ, ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯಕ್ಕೆ ಇಲ್ಲ. ಸಿದ್ದರಾಮಯ್ಯ ಅವರು ತೊಂದರೆಯಲ್ಲಿ ಸಿಲುಕಿದಾಗಲೆಲ್ಲಾ ಹಿಂದುಳಿದ ವರ್ಗಗಳು ಅಥವಾ ಜಾತಿ ಜನಗಣತಿಗೆ ಸಂಬಂಧಿಸಿದ ವಿಷಯಗಳನ್ನು ಎತ್ತುತ್ತಿದ್ದಾರೆಂದೂ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

24 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

47 mins ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

5 hours ago