ಮೈಸೂರು : ಎಲ್ಲಾ ವಿಚಾರಗಳನ್ನು ಒಳಗಡೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಪಕ್ಷದ ದೃಷ್ಟಿಯಿಂದ ಹೊರಗಡೆ ಎಲ್ಲರೂ ಒಟ್ಟಿಗೆ ಧ್ವನಿ ಎತ್ತಬೇಕು. ರಾಜ್ಯಾಧ್ಯಕ್ಷರು ಈಗಾಗಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗೆಯೇ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡುವ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಫೈನಾನ್ಸ್ ಕಿರುಕುಳ; ಹೆಚ್ಚಿನ ಕ್ರಮ ಅಗತ್ಯ
ಮೈಕ್ರೋ ಫೈನಾನ್ಸ್ನವರು ಸಾಲ ಮರುಪಾವತಿಗಾಗಿ ಕಿರುಕುಳ ನೀಡುತ್ತಿದ್ದಾರೆ. ಈ ಸಮಯದಲ್ಲಿ ಸರ್ಕಾರ ಸ್ನೇಹಿತನಂತೆ ವರ್ತಿಸಬೇಕಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನೂ ಹೆಚ್ಚಿನ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ಕೇಂದ್ರ ಬಜೆಟ್ ಮೇಲೆ ನಿರೀಕ್ಷೆಗಳು
ಮೈಸೂರಿಗೆ ಈ ಬಜೆಟ್ನಲ್ಲಿ ಸಾಕಷ್ಟು ವಿಚಾರಗಳಿಗೆ ಮನವಿ ಮಾಡಿದ್ದೇನೆ. ಆದರೆ ಈಗಾಗಲೇ ಆಗಿರುವ ಕೆಲಸಗಳೇ ಬಾಕಿ ಇದೆ. ರೈಲು ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಅಭಿವೃದ್ಧಿ, ಮೈಸೂರು-ಕುಶಾಲನಗರ ಹೆದ್ದಾರಿ, ಮಣಿಪಾಲ್ ಆಸ್ಪತ್ರೆ ಬಳಿಯ -ಓವರ್, ಮೈಸೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನೇಕ ಕೆಲಸಗಳು ಆಗಬೇಕಿದೆ.
ಕೊಡಗಿನ ಚಿಕ್ಕ ಚಿಕ್ಕ ಹಾಡಿಗಳಿಗೆ ರಸ್ತೆ, ಇದರ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಮೈಸೂರಿನಲ್ಲಿರುವ ಹಳೆಯ ಡಿಸಿ ಕಚೇರಿಯನ್ನು ಮ್ಯೂಸಿಯಂ ಮಾಡಬೇಕು. ಮೈಸೂರಿನಲ್ಲಿ ಯೋಗಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ. ನಗರದ ಎಲ್ಐಸಿ ವೃತ್ತದಲ್ಲಿ ಅರ್ಜುನ ಆನೆಯ ಪ್ರತಿಮೆ ಸ್ಥಾಪನೆ ಆಗಬೇಕು. ಅದಕ್ಕೆ ನಗರಪಾಲಿಕೆಗೆ ಕೂಡಾ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…