ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ.
ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.
ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…