ಮೈಸೂರು

ಬಿಜೆಪಿ ನಮ್ಮ ಸಮುದಾಯಕ್ಕೆ ಕೈಹಾಕಿ ತೊಂದರೆ ಕೊಟ್ಟಿದೆ- ಈ ಸರ್ಕಾರವನ್ನು ಕಿತ್ತೊಗೆಯಬೇಕು : ಅಬ್ದುಲ್ ಜಬ್ಬಾರ್

ಮೈಸೂರು: ಕಳೆದ ೧೦ ವರ್ಷದ ಅವಧಿಯಲ್ಲಿ ನಮ್ಮ ಸಮುದಾಯದ ವೈಯಕ್ತಿಕ ವಿಚಾರಕ್ಕೂ ಬಿಜೆಪಿ ಕೈಹಾಕಿ ತೊಂದರೆ ಕೋಟ್ಟಿದೆ. ಇಂತಹ ದುಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾದ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು.

ಬುಧವಾರ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಲ್ಲಾ ಅಲ್ಪಸಂಖ್ಯಾತ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಮುಸ್ಲಿಂ ಮುಖಂಡರ ಸಭೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸವಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ನಮ್ಮನ್ನು ವಿನಾಕಾರಣ ದೂಷಿಸುತ್ತದೆ. ಮುಸ್ಲಿಂ, ಪಾಕಿಸ್ತಾನ ಎಂದು ತಳುಕು ಹಾಕುವುದನ್ನೇ ಮಂತ್ರವಾಗಿಸಿಕೊಂಡಿದೆ. ನಮ್ಮಲ್ಲಿ ಒಗ್ಗಟ್ಟು ಮೂಡಿದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯಬಹುದು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟಕರವಾಗಲಿದೆ ಎಂದರು.

ರಾಜ್ಯ ಸರ್ಕಾರ ನೀಡಿರುವ ಐದು ಗ್ಯಾರಂಟಿಯೋಜನೆಗಳಿಂದ ಎಲ್ಲ ಸಮುದಾಯದವರಿಗೂ ಒಳ್ಳೆಯದಾಗಿದೆ. ನಮ್ಮ ಸಮುದಾಯದವರು ಹೆಚ್ಚು ಬಳಸಿಕೊಂಡಿದ್ದಾರೆ. ಮುಂದೆ ಕೂಡ ರೈತರ ಸಾಲ ಮನ್ನ, ಮಹಾಲಕ್ಷಿ ಮುಂತಾದಂತಹ  ಕೇಂದ್ರದ ಗ್ಯಾರಂಟಿ  ಯೋಜನೆಗಳು ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದರು.

ಹೀಗಾಗಿ ಏ.೨೬ ರಂದು ಬೆಳಿಗ್ಗೆ ನವಾಝ್ ಮಾಡಿ ಇಡೀ ಕುಟುಂಬದವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮಾತನಾಡಿ, ಬ್ರಿಟೀಷರ ಆಳ್ವಿಕೆ ವೇಳೆ ನಡೆದ ಸ್ವಾತಂತ್ರ್ಯ ಹೋರಾಟದದಲ್ಲಿ ಸಾಕಷ್ಟು ತ್ಯಾಗ ಬಲಿದಾನ ನಡೆದಿದೆ. ಇದೀಗ ಬಿಜೆಪಿಯಂತಹ ದುಷ್ಟ ಸರ್ಕಾರವನ್ನು ಓಡಿಸಲು ಅಂತಹುದ್ದೇ ಹೋರಾಟ, ತ್ಯಾಗವನ್ನು ಮಾಡಬೇಕಿದೆ. ನಮ್ಮಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ಬದಿಗಿರಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಭಿಮಾನದ ಹೋರಾಟವನ್ನು ಮಾಡಬೇಕು ಎಂದು ಕರೆನೀಡಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿ, ಈ ದೇಶದಲ್ಲಿ ಬದುಕುತ್ತಿರುವ ಎಲ್ಲರು ಕೂಡ ಭಾರತೀಯರೆ, ಹಿಂದುಗಳು, ಅಲ್ಪಸಂಖ್ಯಾತರು ಎಂಬ ಬೇದಭಾವವನ್ನು ಕಂಡರೂ ಕೂಡ ಮಾಡಬಾರದು. ಇದು ಸ್ವಾಸ್ಥತ್ಯೃ ಸವಾಜಕ್ಕೆ ಅಪಾಯ ಎಂದು ಹೇಳಿದರು.

೫ ವರ್ಷಗಳಿಗೆ ಒಮ್ಮೆ ಚುನಾವಣೆ ಬರುತ್ತದೆ. ಈ ವೇಳೆ ನಾವು ಎಚ್ಚರಿಕೆಯಿಂದ ಮತದಾನ ಮಾಡಬೇಕು. ಹಿಂದು, ಮುಸ್ಲಿಂ ಎಂಬ ಬೇಧವಿಲ್ಲದೆ ಎಲ್ಲರೂ ಒಗ್ಗಟ್ಟಾಗುವ ಮೂಲಕ ನರೇಂದ್ರಮೋದಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಹೆಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌, ಸಮಯದ ಅಭಾವದಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷತ್ಮಣ್ ಅವರು ಎಲ್ಲರನ್ನೂ ತಲುಪಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿರಂತರ ಸಭೆಗಳನ್ನು ನಡೆಸಿ ಎಂಬ ಸೂಚನೆ ಬಂದಿದೆ. ಅದರಂತೆ ಇಂದು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು.

ಇದೇ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೋಸಿನ್ ಖಾನ್ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ರಾಜ್ಯ ಅಲ್ಪಸಂಖ್ಯಾತರ ಘಟಕದ ಸಿರಾಜ್, ಜಾವೆದ್ ಪಾಷಾ, ವಾಸೀಂ, ತಿಮ್ಮರಾಜು, ಮಾಜಿ ಮಹಾಪೌರ ಆಯೂಬ್‌ ಖಾನ್, ಆರೀಫ್‌ಹುಸೇನ್, ಅಸ್ರತುಲ್ಲ, ಶಿವನಾಗಪ್ಪ, ಅಕ್ಬರ್ ಅಲಿ, ಶೌಕತ್ ಪಾಷಾ, ಸಿದ್ದಪ್ಪ, ಷಫಿ, ನಜರಬಾದ್ ನಟರಾಜ್, ಈಶ್ವರ ಚಕ್ಕಡಿ ಮುಂತಾದವರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago