ಮೈಸೂರು

ಬಿಜೆಪಿ ನಮ್ಮ ಸಮುದಾಯಕ್ಕೆ ಕೈಹಾಕಿ ತೊಂದರೆ ಕೊಟ್ಟಿದೆ- ಈ ಸರ್ಕಾರವನ್ನು ಕಿತ್ತೊಗೆಯಬೇಕು : ಅಬ್ದುಲ್ ಜಬ್ಬಾರ್

ಮೈಸೂರು: ಕಳೆದ ೧೦ ವರ್ಷದ ಅವಧಿಯಲ್ಲಿ ನಮ್ಮ ಸಮುದಾಯದ ವೈಯಕ್ತಿಕ ವಿಚಾರಕ್ಕೂ ಬಿಜೆಪಿ ಕೈಹಾಕಿ ತೊಂದರೆ ಕೋಟ್ಟಿದೆ. ಇಂತಹ ದುಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾದ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು.

ಬುಧವಾರ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಲ್ಲಾ ಅಲ್ಪಸಂಖ್ಯಾತ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಮುಸ್ಲಿಂ ಮುಖಂಡರ ಸಭೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸವಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ನಮ್ಮನ್ನು ವಿನಾಕಾರಣ ದೂಷಿಸುತ್ತದೆ. ಮುಸ್ಲಿಂ, ಪಾಕಿಸ್ತಾನ ಎಂದು ತಳುಕು ಹಾಕುವುದನ್ನೇ ಮಂತ್ರವಾಗಿಸಿಕೊಂಡಿದೆ. ನಮ್ಮಲ್ಲಿ ಒಗ್ಗಟ್ಟು ಮೂಡಿದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯಬಹುದು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟಕರವಾಗಲಿದೆ ಎಂದರು.

ರಾಜ್ಯ ಸರ್ಕಾರ ನೀಡಿರುವ ಐದು ಗ್ಯಾರಂಟಿಯೋಜನೆಗಳಿಂದ ಎಲ್ಲ ಸಮುದಾಯದವರಿಗೂ ಒಳ್ಳೆಯದಾಗಿದೆ. ನಮ್ಮ ಸಮುದಾಯದವರು ಹೆಚ್ಚು ಬಳಸಿಕೊಂಡಿದ್ದಾರೆ. ಮುಂದೆ ಕೂಡ ರೈತರ ಸಾಲ ಮನ್ನ, ಮಹಾಲಕ್ಷಿ ಮುಂತಾದಂತಹ  ಕೇಂದ್ರದ ಗ್ಯಾರಂಟಿ  ಯೋಜನೆಗಳು ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದರು.

ಹೀಗಾಗಿ ಏ.೨೬ ರಂದು ಬೆಳಿಗ್ಗೆ ನವಾಝ್ ಮಾಡಿ ಇಡೀ ಕುಟುಂಬದವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮಾತನಾಡಿ, ಬ್ರಿಟೀಷರ ಆಳ್ವಿಕೆ ವೇಳೆ ನಡೆದ ಸ್ವಾತಂತ್ರ್ಯ ಹೋರಾಟದದಲ್ಲಿ ಸಾಕಷ್ಟು ತ್ಯಾಗ ಬಲಿದಾನ ನಡೆದಿದೆ. ಇದೀಗ ಬಿಜೆಪಿಯಂತಹ ದುಷ್ಟ ಸರ್ಕಾರವನ್ನು ಓಡಿಸಲು ಅಂತಹುದ್ದೇ ಹೋರಾಟ, ತ್ಯಾಗವನ್ನು ಮಾಡಬೇಕಿದೆ. ನಮ್ಮಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ಬದಿಗಿರಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಭಿಮಾನದ ಹೋರಾಟವನ್ನು ಮಾಡಬೇಕು ಎಂದು ಕರೆನೀಡಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿ, ಈ ದೇಶದಲ್ಲಿ ಬದುಕುತ್ತಿರುವ ಎಲ್ಲರು ಕೂಡ ಭಾರತೀಯರೆ, ಹಿಂದುಗಳು, ಅಲ್ಪಸಂಖ್ಯಾತರು ಎಂಬ ಬೇದಭಾವವನ್ನು ಕಂಡರೂ ಕೂಡ ಮಾಡಬಾರದು. ಇದು ಸ್ವಾಸ್ಥತ್ಯೃ ಸವಾಜಕ್ಕೆ ಅಪಾಯ ಎಂದು ಹೇಳಿದರು.

೫ ವರ್ಷಗಳಿಗೆ ಒಮ್ಮೆ ಚುನಾವಣೆ ಬರುತ್ತದೆ. ಈ ವೇಳೆ ನಾವು ಎಚ್ಚರಿಕೆಯಿಂದ ಮತದಾನ ಮಾಡಬೇಕು. ಹಿಂದು, ಮುಸ್ಲಿಂ ಎಂಬ ಬೇಧವಿಲ್ಲದೆ ಎಲ್ಲರೂ ಒಗ್ಗಟ್ಟಾಗುವ ಮೂಲಕ ನರೇಂದ್ರಮೋದಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಹೆಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌, ಸಮಯದ ಅಭಾವದಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷತ್ಮಣ್ ಅವರು ಎಲ್ಲರನ್ನೂ ತಲುಪಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿರಂತರ ಸಭೆಗಳನ್ನು ನಡೆಸಿ ಎಂಬ ಸೂಚನೆ ಬಂದಿದೆ. ಅದರಂತೆ ಇಂದು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು.

ಇದೇ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೋಸಿನ್ ಖಾನ್ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ರಾಜ್ಯ ಅಲ್ಪಸಂಖ್ಯಾತರ ಘಟಕದ ಸಿರಾಜ್, ಜಾವೆದ್ ಪಾಷಾ, ವಾಸೀಂ, ತಿಮ್ಮರಾಜು, ಮಾಜಿ ಮಹಾಪೌರ ಆಯೂಬ್‌ ಖಾನ್, ಆರೀಫ್‌ಹುಸೇನ್, ಅಸ್ರತುಲ್ಲ, ಶಿವನಾಗಪ್ಪ, ಅಕ್ಬರ್ ಅಲಿ, ಶೌಕತ್ ಪಾಷಾ, ಸಿದ್ದಪ್ಪ, ಷಫಿ, ನಜರಬಾದ್ ನಟರಾಜ್, ಈಶ್ವರ ಚಕ್ಕಡಿ ಮುಂತಾದವರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

32 mins ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

11 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

14 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

14 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

14 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

15 hours ago