ಮೈಸೂರು

ಬಿಜೆಪಿಗೆ ನೈತಿಕ ಹಕ್ಕಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು.

ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಮಾಧ್ಯಮದವರಿಗೆ ನೆನಪಿಸಿದರು.

ದ್ವೇಷದ ರಾಜಕಾರಣ ಮಾಡುತ್ತಿಲ್ಲ : ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತನಿಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತನಿಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ ಎಂದು ಪ್ರಶ್ನಿಸಿದರು.

lokesh

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

1 hour ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

1 hour ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

1 hour ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

1 hour ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

2 hours ago