ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು.
ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಮಾಧ್ಯಮದವರಿಗೆ ನೆನಪಿಸಿದರು.
ದ್ವೇಷದ ರಾಜಕಾರಣ ಮಾಡುತ್ತಿಲ್ಲ : ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತನಿಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತನಿಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ ಎಂದು ಪ್ರಶ್ನಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…