ಮೈಸೂರು: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…