ಮೈಸೂರು: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…