ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದ್ದಾರೆ.
ನಗರದಲ್ಲಿಂದು (ಮಾ.೨೯) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮಾತನಾಡಿದ ಹೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿಲಾಯಿತು. ಮುಂದೆ ಸಿಎಂ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಬಿಜೆಪಿ ಕಾಯುತ್ತಿದೆ. ಹಾಗಾಗಿ ಈ ಬಾರಿಯ ಮತದಾರರು ಯೋಚಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನೂ ಜೈಲಿಗೆ ಹಾಕಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಕಾರಣ ಕೇಳಿದರೇ ಹೇಳುವುದಿಲ್ಲ. ಇದು ಬಿಜೆಪಿಯ ಷಡ್ಯಂತರವಾಗಿದೆ. ಹೀಗಾಗಿ ಈ ಬಾರಿಯ ಚುನಾವಣೆಯನ್ನು ಮತದಾರರು ಗಂಭೀರವಾಗಿ ಪರಿಗಣಿಸಿ ಎಂದು ತಿಳಿಸಿದರು.
ನಾನೊಬ್ಬ ಜನ ಸಾಮಾನ್ಯರ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ. ನಾನು ಎಂದಿಗೂ ಜಾತಿ ಆಧಾರದ ಮೇಲೆ ರಾಜಕೀಯ ಮಾಡಿಲ್ಲ. ಸಿಎಂ ಅವರಿಗೆ ತಮ್ಮ ಕ್ಷೇತ್ರವನ್ನು ಗೆಲ್ಲಲಾಗಲಿಲ್ಲ ಎಂಬ ನೋವಿದೆ. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ ಎಂದು ಮನವಿ ಮಾಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…