ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದ್ದಾರೆ.
ನಗರದಲ್ಲಿಂದು (ಮಾ.೨೯) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮಾತನಾಡಿದ ಹೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿಲಾಯಿತು. ಮುಂದೆ ಸಿಎಂ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಬಿಜೆಪಿ ಕಾಯುತ್ತಿದೆ. ಹಾಗಾಗಿ ಈ ಬಾರಿಯ ಮತದಾರರು ಯೋಚಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನೂ ಜೈಲಿಗೆ ಹಾಕಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಕಾರಣ ಕೇಳಿದರೇ ಹೇಳುವುದಿಲ್ಲ. ಇದು ಬಿಜೆಪಿಯ ಷಡ್ಯಂತರವಾಗಿದೆ. ಹೀಗಾಗಿ ಈ ಬಾರಿಯ ಚುನಾವಣೆಯನ್ನು ಮತದಾರರು ಗಂಭೀರವಾಗಿ ಪರಿಗಣಿಸಿ ಎಂದು ತಿಳಿಸಿದರು.
ನಾನೊಬ್ಬ ಜನ ಸಾಮಾನ್ಯರ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ. ನಾನು ಎಂದಿಗೂ ಜಾತಿ ಆಧಾರದ ಮೇಲೆ ರಾಜಕೀಯ ಮಾಡಿಲ್ಲ. ಸಿಎಂ ಅವರಿಗೆ ತಮ್ಮ ಕ್ಷೇತ್ರವನ್ನು ಗೆಲ್ಲಲಾಗಲಿಲ್ಲ ಎಂಬ ನೋವಿದೆ. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ ಎಂದು ಮನವಿ ಮಾಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…