ಮೈಸೂರು

ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

9 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

10 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

11 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

11 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

11 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

12 hours ago