ಮೈಸೂರು

ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago