ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.
ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಳ್ಳು ಆರೋಪಗಳ ವಿರುದ್ಧ ಹೋರಾಟ
ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…