ಮೈಸೂರು

ಸಿಎಂ ರಾಜೀನಾಮೆ ಆಗ್ರಹಿಸಿ ಇಂದು ಬಿಜೆಪಿ ಜೆಡಿಎಸ್‌ ಪ್ರತಿಭಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್‌ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ವಿಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ.

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ಆಗ್ರಹಿಸಿ ವಿಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಕೂಡ ಇದಕ್ಕೆ ಪ್ರತಿಯಾಗಿ ಮೈಸೂರಲ್ಲಿ ಜನಾಂದೋಲನ ಸಮಾವೇಶ ಮಾಡಿ ಏಟಿಗೆ ಎದುರೇಟು ನೀಡಿದ್ದರು.

ಆದರೆ, ಹೀಗಾಗಲೇ ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಸಿಕ್ಕಿದೆ. ಹೀಗಾಗಿ ಮೈತ್ರಿ ಪಕ್ಷಗಳು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿದೆ. ಕಾಂಗ್ರೆಸ್‌ ತನ್ನ ತಪ್ಪು ಮರೆಮಾಚಿಕೊಳ್ಳಲು ಕೇಂದ್ರ ಹಾಗೂ ರಾಜ್ಯಾಪಾಲರ ವಿರುದ್ಧ ಆರೋಪ ಹೊರಿಸುತ್ತಿದೆ ಎಂಬ ಜನಾಭಿಪ್ರಾಯವನ್ನು ಮೈತ್ರಿ ನಾಯಕರು ಬಿತ್ತಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

9 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

10 hours ago