ಮೈಸೂರು

ಪರಿಷತ್‌ ಚುನಾವಣೆ: ಮೈಸೂರಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಬಲ ಪ್ರದರ್ಶನ

ಮೈಸೂರು: ವಿಧಾನ ಪರಿಷತ್‌ ಚುನಾವಣಾ ಹಿನ್ನಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಗೆಲ್ಲಲು ಮೈಸೂರಿನಲ್ಲಿಂದು (ಮಂಗಳವಾರ, ಮೇ.21) ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ ನೇತೃತಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಬಲ ಪ್ರದರ್ಶನ ಮಾಡಿದರು.

ಇಲ್ಲಿನ ನಿವೇದಿತಾ ನಗರ ಕಲ್ಯಾಣ ಮಂಟಪದಲ್ಲಿ ನಡೆದ ಮೈತ್ರಿ ಸಭೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ. ವಿವೇಕಾನಂದ ಗೆಲ್ಲಿಸಲು ಒಮ್ಮತದಿಂದ ಸಹಕರಿಸುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಮಾಡಿದ್ದು, ಎಚ್‌.ಡಿ ದೇವೇಗೌಡರ ಸರ್ಕಾರ ಬಳಿಕ 2006-07 ರಲ್ಲಿ 50 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರವಾಗಿದೆ. ಹೀಗಾಗಿ ಈ ಬಾರಿ ಶಿಕ್ಷಕರು ನಮ್ಮ ಕೈ ಹಿಡಿಯಲಿದ್ದಾರೆ ಎಂದು ಎಚ್‌ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಕರ ಮನವೊಲಿಸಲು ಮತದಾರರ ಮನೆ ಖುದ್ದು ಕಾರ್ಯಕರ್ತರು ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡಬೇಕು. ಮೈಸೂರು-ಚಾಮರಾಜನಗರ-ಮಂಡ್ಯ-ಹಾಸನ ಶಿಕ್ಷಕರು ದಾಖಲೆಯ ಅಂತರದಲ್ಲಿ ನಮ್ಮ ಅಭ್ಯರ್ಥಿ ವಿವೇಕಾನಂದ ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಶಾಸಕ ಅಶ್ವಥ್‌ ನಾರಾಯಣ, ನಮ್ಮ ಮೈತ್ರಿ ಪಕ್ಷದ ಶಕ್ತಿಯನ್ನು ರಾಜ್ಯದ ಜನತೆ ನೋಡಿದ್ದಾರೆ. ಈ ಮೈತ್ರಿಯಿಂದ ಪರಿಷತ್‌ ಚುನಾವಣೆಯಲ್ಲಿ ನಮ್ಮ ಶಕ್ತಿ ಹೆಚ್ಚಿರುವುದರಿಂದ ಸರ್ಕಾರ ಭಯ ಶುರುವಾಗಿದೆ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಜಯ ದಾಖಲಿಸಲಿದ್ದಾರೆ. ಈ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುವ ಮೂಲಕ ಶಿಕ್ಷಣ ವಿರೋಧಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮಾತನಾಡಿ, ಕಾಂಗ್ರೆಸ್‌ ಪಕ್ಷದ ದರ್ಪ, ಅಹಂಕಾರದ ಆಡಳಿತ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕು. ನಮ್ಮ ಒಗ್ಗಟ್ಟಿನ ಹೋರಾಟದಿಂದ ಮಾತ್ರವೇ ಶಾಸ್ವತ ಉಳಿಗಾಲ ಸಿಗಲಿದೆ ಎಂದು ತಿಳಿಸಿದರು.

ಶಾಸಕ ಸಾ.ರಾ ಮಹೇಶ್‌, ಟಿ.ಎಸ್‌ ಶ್ರೀವಸ್ತ, ಸ್ವರೂಪ್‌ ಗೌಡ, ಎಚ್‌.ಡಿ ರೇವಣ್ಣ, ಎನ್‌. ಮಹೇಶ್‌ ಸೇರಿದಂತೆ ಹಲವು ಜೆಡಿಎಸ್‌-ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

3 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

3 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago