ಮೈಸೂರು

ರಾಜ್ಯದಲ್ಲಿ ಕಾಂಗ್ರೆಸ್‌ ಕಿತ್ತೊಗೆಯಲು ಮೈತ್ರಿ ಹೋರಾಟ ನಡೆಸಲಿದೆ: ನಿಖಿಲ್‌ ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ಕಡೆಯ ಆಷಾಡ ಶುಕ್ರವಾರ ದಿನ ಚಾಮುಂಡಿ ದೇವಿಯ ದರ್ಶನ ಪಡೆದು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಹಗರಣ, ಮುಡಾ ಹಗರಣಗಳನ್ನು ಅಂತಿಮ ಘಟಕ್ಕೆ ಕೊಂಡೊಯ್ಯುವುದು ನಮ್ಮ ಪಾದಯಾತ್ರೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಜನರ ಪರವಾಗಿ ನಾವು ಒಗ್ಗಟ್ಟಾಗಿ ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ನಿಖಿಲ್‌ ಹೇಳಿದರು.

ಇನ್ನು ರಾಜ್ಯಾದ್ಯಂತ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ನಾವು ಪಾದಯಾತ್ರೆಯನ್ನು ಮುಂದೂಡಲು ಮನವಿ ಮಾಡಿದ್ದೇವು. ಆದರೆ ಬಿಜೆಪಿ ಅವರು ಮುಂದೂಡುವುದು ಬೇಡ ಎಂದು ಹೇಳಿದ್ದಕ್ಕೆ ನಾವು ಸಹಮತ ಸೂಚಿಸಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಹಗರಣ ನಡೆದಿರುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಿಎಂ ಅವರೇ ನೇರ ಹೋಣೆಯಾಗಿದ್ದು, ಈ ಎಲ್ಲಾ ಹಗರಣಗಳ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ ಎಂದು ಹೇಳಿದರು.

ಇನ್ನು ಮೈತ್ರಿಯಲ್ಲಿನ ಬಿರುಕು ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, ಮೈತ್ರಿಗೆ ಜನ ಬೆಂಬಲ ಸಿಕ್ಕಿದ್ದಕ್ಕಾಗಿಯೇ, ಲೋಕಸಭಾ ಚುನಾವಣೆಯಲ್ಲಿ ನಮಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲ್ಲು ಸಾಧ್ಯವಾಗಿದೆ ಎಂದು ಪರೋಕ್ಷವಾಗಿ ಟಾಂಗ್‌ ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

5 hours ago