ಮೈಸೂರು

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಅವರು ನಂಬುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ಇದು ನಾಡಹಬ್ಬವಾಗಿದ್ದು, ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸೇರಿಯೇ ಆಚರಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ತಿರುಗೇಟು ನೀಡಿದೆ.

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಬಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಒಪ್ಪಿಕೊಂಡು ಅವುಗಳಲ್ಲಿ ನಂಬಿಕೆ ಇಟ್ಟರೆ, ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು

ಬಾನು ಮುಷ್ತಾಕ್ ಮತ್ತು ಅನುವಾದಕಿ ಕೊಡಗಿನ ದೀಪಾ ಭಸ್ತಿ ಇಬ್ಬರೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಜೊತೆಗೆ ಕೊಡಗಿನ ದೀಪಾ ಭಸ್ತಿ ಅವರನ್ನು ಆಹ್ವಾನಿಸಬೇಕಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಹೆಚ್ಚು ಆಸಕ್ತಿ ಇಲ್ಲವೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಒಬ್ಬ ಬರಹಗಾರ್ತಿಯಾಗಿ, ನಾವು ಅವರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮ ಸಂಪ್ರದಾಯ, ಆಚರಣೆಗಳು ಅಥವಾ ಧಾರ್ಮಿಕ ಭಾವನೆಗಳನ್ನು ಒಪ್ಪಿಕೊಂಡಿದ್ದರೆ, ಅದು ಬೇರೆಯದೇ ವಿಷಯವಾಗುತ್ತಿತ್ತು. ಈ ಹಿಂದೆ, ಲೇಖಕ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ಸರ್ ಮಿರ್ಜಾ ಇಸ್ಲಾಮಿಯಲ್ ದಿವಾನರಾಗಿ ದಸರಾ ಮಾಡಿಲ್ಲವೇ? ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿಲ್ಲವೇ? ಇದಕ್ಕೆಲ್ಲಾ ಆಕ್ಷೇಪ ವ್ಯಕ್ತಪಡಿಸಬಾರದು. ನಾವು ನಾಡ ಹಬ್ಬವನ್ನು ಆಚರಿಸುವಾಗ ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಅಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದರು.

ಇದು ನಾಡ ಹಬ್ಬ, ಈ ನೆಲದ ಹಬ್ಬ. ಇದನ್ನು ಬಹಳ ಸಮಯದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನೀವು ಧಾರ್ಮಿಕ ವಿಷಯಗಳನ್ನು ಏಕೆ ಇದರಲ್ಲಿ ತರುತ್ತಿದ್ದೀರಿ? ಸಮಾಜದ ಒಂದು ವರ್ಗವನ್ನು ಹೊರಗೆ ಇಟ್ಟುಕೊಂಡು ನೀವು ಹಬ್ಬವನ್ನು ಆಚರಿಸುತ್ತೀರಾ? ಎಂದು ಪರಮೇಶ್ವರ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

5 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

5 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

6 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

7 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 hours ago