ಮೈಸೂರು

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಅವರು ನಂಬುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ಇದು ನಾಡಹಬ್ಬವಾಗಿದ್ದು, ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸೇರಿಯೇ ಆಚರಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ತಿರುಗೇಟು ನೀಡಿದೆ.

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಬಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಒಪ್ಪಿಕೊಂಡು ಅವುಗಳಲ್ಲಿ ನಂಬಿಕೆ ಇಟ್ಟರೆ, ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು

ಬಾನು ಮುಷ್ತಾಕ್ ಮತ್ತು ಅನುವಾದಕಿ ಕೊಡಗಿನ ದೀಪಾ ಭಸ್ತಿ ಇಬ್ಬರೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಜೊತೆಗೆ ಕೊಡಗಿನ ದೀಪಾ ಭಸ್ತಿ ಅವರನ್ನು ಆಹ್ವಾನಿಸಬೇಕಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಹೆಚ್ಚು ಆಸಕ್ತಿ ಇಲ್ಲವೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಒಬ್ಬ ಬರಹಗಾರ್ತಿಯಾಗಿ, ನಾವು ಅವರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮ ಸಂಪ್ರದಾಯ, ಆಚರಣೆಗಳು ಅಥವಾ ಧಾರ್ಮಿಕ ಭಾವನೆಗಳನ್ನು ಒಪ್ಪಿಕೊಂಡಿದ್ದರೆ, ಅದು ಬೇರೆಯದೇ ವಿಷಯವಾಗುತ್ತಿತ್ತು. ಈ ಹಿಂದೆ, ಲೇಖಕ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ಸರ್ ಮಿರ್ಜಾ ಇಸ್ಲಾಮಿಯಲ್ ದಿವಾನರಾಗಿ ದಸರಾ ಮಾಡಿಲ್ಲವೇ? ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿಲ್ಲವೇ? ಇದಕ್ಕೆಲ್ಲಾ ಆಕ್ಷೇಪ ವ್ಯಕ್ತಪಡಿಸಬಾರದು. ನಾವು ನಾಡ ಹಬ್ಬವನ್ನು ಆಚರಿಸುವಾಗ ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಅಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದರು.

ಇದು ನಾಡ ಹಬ್ಬ, ಈ ನೆಲದ ಹಬ್ಬ. ಇದನ್ನು ಬಹಳ ಸಮಯದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನೀವು ಧಾರ್ಮಿಕ ವಿಷಯಗಳನ್ನು ಏಕೆ ಇದರಲ್ಲಿ ತರುತ್ತಿದ್ದೀರಿ? ಸಮಾಜದ ಒಂದು ವರ್ಗವನ್ನು ಹೊರಗೆ ಇಟ್ಟುಕೊಂಡು ನೀವು ಹಬ್ಬವನ್ನು ಆಚರಿಸುತ್ತೀರಾ? ಎಂದು ಪರಮೇಶ್ವರ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago