ಮೈಸೂರು

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಅವರು ನಂಬುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ಇದು ನಾಡಹಬ್ಬವಾಗಿದ್ದು, ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸೇರಿಯೇ ಆಚರಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ತಿರುಗೇಟು ನೀಡಿದೆ.

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಬಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಒಪ್ಪಿಕೊಂಡು ಅವುಗಳಲ್ಲಿ ನಂಬಿಕೆ ಇಟ್ಟರೆ, ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು

ಬಾನು ಮುಷ್ತಾಕ್ ಮತ್ತು ಅನುವಾದಕಿ ಕೊಡಗಿನ ದೀಪಾ ಭಸ್ತಿ ಇಬ್ಬರೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಜೊತೆಗೆ ಕೊಡಗಿನ ದೀಪಾ ಭಸ್ತಿ ಅವರನ್ನು ಆಹ್ವಾನಿಸಬೇಕಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಹೆಚ್ಚು ಆಸಕ್ತಿ ಇಲ್ಲವೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಒಬ್ಬ ಬರಹಗಾರ್ತಿಯಾಗಿ, ನಾವು ಅವರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮ ಸಂಪ್ರದಾಯ, ಆಚರಣೆಗಳು ಅಥವಾ ಧಾರ್ಮಿಕ ಭಾವನೆಗಳನ್ನು ಒಪ್ಪಿಕೊಂಡಿದ್ದರೆ, ಅದು ಬೇರೆಯದೇ ವಿಷಯವಾಗುತ್ತಿತ್ತು. ಈ ಹಿಂದೆ, ಲೇಖಕ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ಸರ್ ಮಿರ್ಜಾ ಇಸ್ಲಾಮಿಯಲ್ ದಿವಾನರಾಗಿ ದಸರಾ ಮಾಡಿಲ್ಲವೇ? ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿಲ್ಲವೇ? ಇದಕ್ಕೆಲ್ಲಾ ಆಕ್ಷೇಪ ವ್ಯಕ್ತಪಡಿಸಬಾರದು. ನಾವು ನಾಡ ಹಬ್ಬವನ್ನು ಆಚರಿಸುವಾಗ ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಅಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದರು.

ಇದು ನಾಡ ಹಬ್ಬ, ಈ ನೆಲದ ಹಬ್ಬ. ಇದನ್ನು ಬಹಳ ಸಮಯದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನೀವು ಧಾರ್ಮಿಕ ವಿಷಯಗಳನ್ನು ಏಕೆ ಇದರಲ್ಲಿ ತರುತ್ತಿದ್ದೀರಿ? ಸಮಾಜದ ಒಂದು ವರ್ಗವನ್ನು ಹೊರಗೆ ಇಟ್ಟುಕೊಂಡು ನೀವು ಹಬ್ಬವನ್ನು ಆಚರಿಸುತ್ತೀರಾ? ಎಂದು ಪರಮೇಶ್ವರ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago